ಎಚ್.ಡಿ.ಕೋಟೆ: ಕೇರಳದ ವಯನಾಡು ಹಾಗೂ ಜಲಾನಯನ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದು, ಕಬಿನಿ ಜಲಾಶಯದಿಂದ ಐದು ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹೊರ ಬಿಡಲಾಗುತ್ತಿದೆ.
ಜಲಾಶಯದ ಗರಿಷ್ಠ ಮಟ್ಟ 2.284 ಅಡಿಯಿದ್ದು, ಇಂದಿನ ಮಟ್ಟ 2.279 ಅಡಿಯಷ್ಟು ನೀರು ಸಂಗ್ರಹವಾಗಿದೆ. 1.7250 ಸಾವಿರ ಕ್ಯುಸೆಕ್ ನೀರು ಒಳ ಹರಿವಿದೆ. ಜಲಾಶಯದಿಂದ 5000 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ ಎಂದು ಕಾರ್ಯಪಾಲಕ ಇಂಜಿನಿಯರ್ ಚಂದ್ರಶೇಖರ್ ಹಾಗೂ ಸಹಾಯ ಕಾರ್ಯ ಪಾಲಕ ಗಣೇಶ್ ತಿಳಿಸಿದರು.

ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಧಿಕಾರಿಗಳಿಗೆ ತಹಸಿಲ್ದಾರ್ ಅವರಿಗೆ ಪ್ರವಾಹ ಮುನ್ನೆಚ್ಚರಿಕೆಯಾಗಿ ಈಗಲೇ ಮಾಹಿತಿ ಕೊಟ್ಟಿದ್ದೇವೆ ನದಿ ಪಾತ್ರದ ಜನರು ತಗ್ಗು ಪ್ರದೇಶಗಳಿಗೆ ತೆರಳಬೇಕು ಕಳೆದ ವರ್ಷಕ್ಕಿಂತ ಪ್ರಸಕ್ತ. ಸಾಲಿನಲ್ಲಿ ವ್ಯಾಪಕ ಮಳೆಯಾಗುವ ಮಾಹಿತಿಯಿರುವುದರಿಂದ ಮುಂಜಾಗ್ರತೆ ವಹಿಸುವಂತೆ ತಿಳಿಸಿದ್ದಾರೆ.
- ಶಿವಕುಮಾರ , ಕೋಟೆ