ಮಂಡ್ಯ-ಜಿಲ್ಲೆಯಲ್ಲಿ ಬೇಸಿಗೆ ಕಾಲ ಆರಂಭವಾಗಿದ್ದು, ಈ ಅವಧಿಯಲ್ಲಿ ಅತಿಯಾದ ಉಷ್ಣಾಂಶದಿಂದಾಗಿ ನಾನಾ ರೀತಿಯ ಆರೋಗ್ಯ ಸಮಸ್ಯೆ ಸಂಭವಿಸುವ ಸಾಧ್ಯತೆಯಿದ್ದು, ಅತಿಯಾದ ಉಷ್ಣಾಂಶದಿಂದ ಸಂಭವಿಸಬಹುದಾದ ಅನಾರೋಗ್ಯ ಪರಿಸ್ಥಿತಿಗಳ ತಡೆಗಟ್ಟುವಿಕೆ, ನಿಯಂತ್ರಣ ಮತ್ತು ನಿರ್ವಹಣೆಯನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ಮಾರ್ಗಸೂಚಿಯನ್ನು ಆರೋಗ್ಯ ಇಲಾಖೆ ಹೊರಡಿಸಿದೆ.
ಹೆಚ್ಚು ನೀರು ಕುಡಿಯುವುದು:-
• ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀರನ್ನು ಆಗಾಗ್ಗೆ ಸೇವಿಸಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ.
• ಪ್ರಯಾಣ ಮಾಡುವ ಸಮಯದಲ್ಲೂ ಕುಡಿಯಲು ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ.
• ಮೌಖಿಕ ಪುನರ್ಜಲೀಕರಣ ದ್ರಾವಣ (Oral Rehydration Solution – ORS), , ಹಾಗೂ ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ/ಲಸ್ಸಿ, ಹಣ್ಣಿನ ಜ್ಯೂಸ್ ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
• ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ. ಅನಾನಸ್, ಸೌತೆಕಾಯಿ, ಲೆಟೂಸ್, ಎಳೆನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು:–
• ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
• ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ದೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ. ಬಿಸಿಲಿನಿಂದ ರಕ್ಷಣೆ ಪಡೆಯುವುದು ಉತ್ತಮ.
• ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್ಗಳನ್ನು ಧರಿಸಬೇಕು.
ಸದಾ ಎಚ್ಚರದಿಂದಿರಿ:
ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆದು. ಅದರಂತೆ ಚಟುವಟಿಕೆಗಳನ್ನು ಯೋಚಿಸುವುದು ಉತ್ತಮ. ಹವಾಮಾನದ ಕುರಿತು ಕಾಲಕಾಲಕ್ಕೆ ಮಾಹಿತಿಯನ್ನು Karnataka State Natural Disaster Monitoring https://www.ksndme.org/default.aspx ನಲ್ಲಿ ಮಾಹಿತಿಯನ್ನು ಪಡೆಯಬಹುದು.
ಸಾಧ್ಯವಾದಷ್ಟು ಒಳಾಂಗಣದಲ್ಲಿರಿ:–
• ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ.
• ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು, ಹಗಲು ಹೊತ್ತಿನಲ್ಲ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿಡಿ. ಹಾಗೂ ತಣ್ಣನೆಯ ಗಾಳಿಯ ಸಂಚಾರಕ್ಕೆ ಅನುಕೂಲವಾಗುವಂತೆ, ರಾತ್ರಿಯ ಹೊತ್ತು ಕಿಟಕಿಗಳನ್ನು ತೆರೆಡಿಡಬೇಕು.
ಹೊರಾಂಗಣ ಚಟುವಟಿಕೆಗಳ ಸಂದರ್ಭದಲ್ಲಿ:-
ಹೊರಾಂಗಣ ಚಟುವಟಿಕೆಗಳನ್ನು ಆದಷ್ಟೂ ದಿನದ ತಣ್ಣನೆಯ ಸಮಯದಲ್ಲಿ, ಅಂದರೆ ಬೆಳಗಿನ ಹೊತ್ತು ಅಥವಾ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಿ. ಹೊರಾಂಗಣ ಪ್ರದೇಶಗಳಲ್ಲಿ ಆಯೋಜಿಸಲಾಗುವ ಚಟುವಟಿಕೆಗಳು ಪೂರ್ವಾಹ್ನ 11 ಗಂಟೆಯ ಒಳಗೆ ಮುಕ್ತಾಯಗೊಳಿಸುವುದು ಉತ್ತಮ.
ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು / ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ:
• ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್ನ ವ್ಯವಸ್ಥೆ ಮಾಡುವುದು
• ಉತ್ತಮ ಗಾಳಿಯ (Air circulation) ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು.
• ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವುದು.
ದುರ್ಬಲ ವ್ಯಕ್ತಿಗಳಿಗೆ:-
ಬಿಸಿ ಗಾಳಿಯ ಒತ್ತಡ ಹಾಗೂ ಬಿಸಿ ಗಾಳಿಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳಿಂದ ಎಲ್ಲರಿಗೂ ಅಪಾಯವಿದೆ. ಆದರೆ ಈ ಕೆಳಕಾಣಿಸಿದ ಗುಂಪಿನ ಜನರಿಗೆ ಹೆಚ್ಚು ಅಪಾಯವಿರುವ ಹಿನ್ನೆಯಲ್ಲಿ ಹೆಚ್ಚುವರಿ ಗಮನವನ್ನು ನೀಡುವುದು ಅಗತ್ಯವಾಗಿದೆ.
• ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು
• ಗರ್ಭಿಣಿಯರು
• ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು
• ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು
• ಆರೋಗ್ಯ ಸಮಸ್ಯೆಗಳಿರುವವರು, ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು.
ತಂಪಾದ ವಾತಾವರಣವಿರುವ ಪ್ರದೇಶದಿಂದ ಬಿಸಿಯಾದ ವಾತಾವರಣದ ಪ್ರದೇಶಕ್ಕೆ ಭೇಟಿ ನೀಡುವ ಜನರು:–
ಬಿಸಿ ಗಾಳಿಯ ಸಂದರ್ಭದಲ್ಲಿ ಸುಮಾರು ಒಂದು ವಾರದ ಅವಧಿಯನ್ನು ಹೊಸ ವಾತಾವರಣಕ್ಕೆ ಒಗ್ಗಿಕೊಳ್ಳಲು (acclimatized) ಮೀಸಲಿಡಬೇಕು ಹಾಗೂ ಈ ಅವಧಿಯಲ್ಲಿ ಹೆಚ್ಚು ನೀರನ್ನು ಸೇವಿಸಬೇಕು. ಹಂತ ಹಂತವಾಗಿ ಬಿಸಿಯಾದ ವಾತಾವರಣದಲ್ಲಿ ಚಟುವಟಿಕೆಗಳನ್ನು ನಡೆಸುವುದರಿಂದ ಒಗ್ಗಿಕೊಳ್ಳಲು ಸಾಧ್ಯವಾಗುತ್ತದೆ.
ಇತರ ಮುನ್ನೆಚ್ಚರಿಕಾ ಕ್ರಮಗಳು:-
• ಪ್ರತ್ಯೇಕವಾಗಿ / ಒಂಟಿಯಾಗಿ ವಾಸಿಸುವ ವೃದ್ಧರು ಅಥವಾ ರೋಗಿಗಳ ಉಸ್ತುವಾರಿ ಹಾಗೂ ಅವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ದೈನಂದಿನವಾಗಿ ಕೈಗೊಳ್ಳಬೇಕು.
• ಮನೆಯ ಒಳಾಂಗಣವನ್ನು ತಣ್ಣಗಿರಿಸಲು ಪರದೆಗಳು / ಷಟರ್ ಗಳನ್ನು ಬಳಸಿ ಹಾಗೂ ರಾತ್ರಿಯ ಸಮಯದಲ್ಲಿ ಕಿಟಕಿಗಳನ್ನು ತೆರೆದಿಡಿ.
• ಹಗಲು ಹೊತ್ತಿನಲ್ಲಿ ಮನೆಯ ಕೆಳಗಿನ ಮಹಡಿಗಳಲ್ಲಿರುವುದು ಉತ್ತಮ.
• ಶರೀರವನ್ನು ತಣ್ಣಗಿಡಲು ಫ್ಯಾನ್ ಅಥವಾ ತೇವವಾದ ಬಟ್ಟೆಯನ್ನು ಬಳಸಬಹುದು.
ಮಾಡಬಾರದ್ದು:-
• ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಬೇಕು.
• ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು.
• ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
• ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡುವುದು ತಪ್ಪಿಸಿ, ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
• ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ.
• ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
• ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
• ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ, ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅಪಾಯಕಾರಿಯಾಗಬಹುದು.
ಮಾಲೀಕರು ಹಾಗೂ ಕೆಲಸಗಾರರಿಗೆ For Employers and workers:-
• ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಪ್ರತಿ 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್ ಅಥವಾ ಅದಕ್ಕಿಂತ ಹೆಚ್ಚು ನೀರು ಕುಡಿಯುವಂತೆ ಗಮನ ವಹಿಸಬೇಕು.
• ಕೆಲಸಗಾರರು ನೇರವಾದ ಸೂರ್ಯವಾದ ಬೆಳಕಿನಲ್ಲಿ ಕೆಲಸ ನಿರ್ವಹಿಸದಂತೆ ಎಚ್ಚರ ವಹಿಸಬೇಕು.
• ಕೆಲಸಗಾರರಿಗೆ ನೆರಳಿನಲ್ಲಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ, ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಬಹುದು.
• ಶ್ರಮದಾಯಕ ಹಾಗೂ ಹೊರಾಂಗಣ ಚಟುವಟಿಕೆಗಳನ್ನು, ತಾಪಮಾನವು ಕಡಿಮೆ ಇರುವ ಸಮಯದಲ್ಲಿ ಅಂದರೆ, ಬೆಳಗಿನ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸುವಂತೆ ವೇಳಾಪಟ್ಟಿಯನ್ನು ಸಿದ್ಧಗೊಳಿಸಬೇಕು.
• ಹೊರಾಂಗಣ ಚಟುವಟಿಕೆಗಳ ಸಂದರ್ಭದಲ್ಲಿ ಕೆಲಸಗಾರರಿಗೆ, ಪ್ರತಿ 1 ಗಂಟೆಗೆ 5 ನಿಮಿಷಗಳ ಬಿಡುವನ್ನು ನೀಡಬೇಕು.
• ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆಯಬೇಕು. ಹವಾಮಾನದ ಇತ್ತೀಚಿನ ಮಾಹಿತಿಗಾಗಿ ಭಾರತದ ಹವಾಮಾನ ಇಲಾಖೆ (India Meteorological Department IMD)ಯ ಜಾಲತಾಣ https://mausam.ind.gov.in ನಲ್ಲಿ ಮಾಹಿತಿಯನ್ನು ಪಡೆಯಬಹುದು.
• ಹೆಚ್ಚುವರಿ ಕೆಲಸಗಾರನ್ನು ನೇಮಿಸಿಕೊಳ್ಳಿ ಅಥವಾ ಕೆಲಸದ ಗತಿಯನ್ನು ( pace of work) ಕಡಿಮೆಗೊಳಿಸಿ.
• ಬದಲಾಗಿರುವ ಹವಾಮಾನಕ್ಕೆ ಎಲ್ಲರೂ ಒಗ್ಗಿಕೊಂಡಿರುವುದನ್ನು ಖಚಿತಪಡಿಸಿಕೊಳ್ಳಿ: ಸಾಮಾನ್ಯವಾಗಿ ಹೆಚ್ಚಿನ ಉಷ್ಣತೆಗೆ ಹೊಂದಿಕೊಳ್ಳಲು ಒಂದು ವಾರ ಅವಧಿಯ ಅವಶ್ಯಕತೆ ಇರುತ್ತದೆ. ಆದ್ದರಿಂದ, ಮೊದಲ ವಾರದಲ್ಲಿ ಪ್ರತಿ ದಿನ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಬಾರದು. ನಂತರ ಕೆಲಸದ ಅವಧಿಯನ್ನು ಹಂತ ಹಂತವಾಗಿ ಹೆಚ್ಚಿಸಬಹುದು.
• ಬಿಸಿಯಾದ ಗಾಳಿ ಹಾಗೂ ಉಷ್ಣತೆಯ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಲಕ್ಷಣಗಳನ್ನು ಗುರುತಿಸುವಂತೆ. ಕೆಲಸಗಾರರಿಗೆ ತರಬೇತಿ ನೀಡಬೇಕು. ವ್ಯಕ್ತಿಗೆ ತನ್ನಲ್ಲಿನ ಲಕ್ಷಣಗಳನ್ನು ಗುರುತಿಸಲು ಸಾಧ್ಯವಾಗದೇ ಇರುವ ಸಂದರ್ಭಗಳು ಹೆಚ್ಚಿರುವುದರಿಂದ
• ಹೊತೆಯಲ್ಲಿನ ಕೆಲಸಗಾರರು ಲಕ್ಷಣಗಳನ್ನು ಪತ್ತೆ ಹಚ್ಚಲು ಅನುಕೂಲವಾಗುವಂತೆ “buddy system” ಅನ್ನು ಪ್ರಾರಂಭಿಸಬೇಕು. ಪ್ರಥಮ ಚಿಕಿತ್ಸೆಯನ್ನು ನೀಡಲು ತರಬೇತಿ ಹೊಂದಿರುವವರು ಲಭ್ಯವಿರಬೇಕು ಹಾಗೂ ಬಿಸಿಗಾಳಿ ಮತ್ತು ಉಷ್ಣತೆಯ ಒತ್ತಡದಿಂದ ಆರೋಗ್ಯ ಸಮಸ್ಯೆಗಳು ಉಂಟಾದ ಸಂದರ್ಭದಲ್ಲಿ ಸ್ಪಂದಿಸಲು ತುರ್ತು ಪ್ರತಿಕ್ರಿಯಾ ಯೋಜನೆಯು (emergency response plan) ಕೆಲಸದ ಸ್ಥಳದಲ್ಲಿ ಲಭ್ಯವಿರಬೇಕು.
• ಗರ್ಭಿಣಿಯರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ನಿಗದಿತ ಆರೋಗ್ಯ ಸಮಸ್ಯೆಗೆ ಔಷಧೋಪಚಾರವನ್ನು ಪಡೆಯುತ್ತಿರುವವರು, ಬಿಸಿಲಿನಲ್ಲಿ ಕಾರ್ಯ ನಿರ್ವಹಿಸುವ ಮುನ್ನ, ತಮ್ಮ ವೈದ್ಯರ ಸಲಹೆಯನ್ನು ಪಡೆಯುವುದು ಅಗತ್ಯವಾಗಿದೆ.
• ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ತಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಪ್ಯಾಂಟ್ ಧರಿಸಬೇಕು. ಹಾಗೂ ಸೂರ್ಯನ ಶಾಖದಿಂದ ರಕ್ಷಿಸಿಕೊಳ್ಳಲು ತಲೆಯ ಭಾಗವನ್ನು ಮುಚ್ಚಿಕೊಳ್ಳಬೇಕು.
• ಬಿಸಿಗಾಳಿ ಮತ್ತು ಉಷ್ಣತೆಯ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಕೆಲಸಗಾರರಲ್ಲಿ ಅರಿವು ಮೂಡಿಸಲು ಶಿಬಿರಗಳನ್ನು ಆಯೋಜಿಸಬೇಕು.
• ತಾಪಮಾನ ಹಾಗೂ ಮುನ್ಸೂಚನೆ ಕುರಿತು ಮಾಹಿತಿ ನೀಡುವ ವ್ಯವಸ್ಥೆಯನ್ನು ಕೆಲಸದ ಸ್ಥಳಗಳಲ್ಲಿ ಅಳವಡಿಸಬೇಕು.
• ಬಿಸಿಗಾಳಿ ಮತ್ತು ಉಷ್ಣತೆಯ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸಲು ಹಾಗೂ ಅವುಗಳಿಂದ ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಲೀಕರು ಹಾಗೂ ಕೆಲಸಗಾರರಿಗೆ ಕರಪತ್ರಗಳನ್ನು ವಿತರಿಸುವುದು ಮತ್ತು ಶಿಬಿರಗಳನ್ನು ಆಯೋಜಿಸಬೇಕು.

ಆರೋಗ್ಯದ ಮೇಲೆ ಅತಿಯಾದ ಉಷ್ಣತೆಯ ಪರಿಣಾಮ:ಅತಿಯಾದ ಉಷ್ಣತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು
• ಸಾಮಾನ್ಯವಾಗಿ ಮನುಷ್ಯನ ದೇಹದ ಉಷ್ಣತೆಯು 36.4ಲಿಅ ನಿಂದ 37.2ಲಿಅ (97.5ಲಿಈ ನಿಂದ 98.9ಲಿಈ) ಆಗಿರುತ್ತದೆ,
• ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ, ಉಷ್ಣತೆಯ ಒತ್ತಡದಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.
• ಅತಿಯಾದ ಉಷ್ಣತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ( ಸಾಧಾರಣದಿಂದ ತೀವ್ರ ಜ್ವರ), ಗಂಧೆಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ). ಪ್ರಜ್ಞೆ ತಪ್ಪುವುದು, ಉಷ್ಣತೆಯಿಂದ ಸುಸ್ತಾಗುವುದು ಹಾಗೂ ಉಷ್ಣತೆಯಿಂದ ಪಾಶ್ವವಾಯು ಉಂಟಾಗುವುದು.
• ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ ಸಮಸ್ಯೆಗಳು, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಅಧಿಕವಾಗುತ್ತವೆ.
ಎಚ್ಚರವಿರಲಿ ಅತಿಯಾದ ಶಾಖದಿಂದ ಈ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು :
• ತಲೆ ಸುತ್ತುವುದು / ಪ್ರಜ್ಞೆ ತಪ್ಪುವುದು
• ವಾಕರಿಕೆ ಅಥವಾ ವಾಂತಿಯಾಗುವುದು
• ಅತಿಯಾದ ಬಾಯಾರಿಕೆ
• ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ
• ತಲೆನೋವು
• ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ.
ಅತಿಯಾದ ಉಷ್ಣತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು
• ಗಮನಿಸಿ – ನಿಮಗೆ ಅಥವಾ ಇಸ್ಮಾಥಿಗಾದರೂ ಅತಿಯಾದ ಉಷ್ಣತೆಯಿಂದ ಮೇಲೆ ತಿಳಿಸಿದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದರೆ.
• ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
• ತಕ್ಷಣವೇ ಸಹಾಯ ಹಾಗೂ ವೈದ್ಯಕೀಯ ನೆರವನ್ನು ಪಡೆಯಿರಿ.
• ದೇಹದ ಉಷ್ಣಾಂಶವನ್ನು ಪರೀಕ್ಷಿಸಿ.
ಮಾಂಸಖಂಡಗಳಲ್ಲಿ ನೆಳೆಸವು ಕಂಡು ಬಂದಲ್ಲಿ (ವಿಶೇಷವಾಗಿ ಕಾಲು, ತೋಳು ಅಥವಾ ಹೊಟ್ಟೆಯ ಭಾಗ ಹಲವು ಸಂದರ್ಭಗಳಲ್ಲಿ ಬೇಸಿಗೆಯ ದಿನಗಳಲ್ಲಿ ನಿರಂತರ ನೋವು )
• ತಕ್ಷಣವೇ ತಂಪಾದ ಸ್ಥಳದಲ್ಲಿ ವಿಶ್ರಾಂತಿ ಪಡೆಯಿರಿ ಹಾಗೂ ಹೆಚ್ಚು ಎಲೆಕ್ಟೋಲೈಟ್ ಗಳನ್ನು ಹೊಂದಿದ ಮೌಖಿಕ ಪುನರ್ಜಲೀಕರಣ ದ್ರಾವಣಗಳನ್ನು ಸೇವಿಸಬೇಕು.
• ಅತಿಯಾದ ಉಷ್ಣತೆಯಿಂದ ಉಂಟಾಗುವ ಸ್ನಾಯು ಸೆಳೆತವು ಗಂಟೆಯ ಅವಧಿಯಲ್ಲಿ ಕಮನಗೊಳ್ಳದಿದ್ದರೆ, ವೈದ್ಯಕೀಯ ನೆರವನ್ನು ಪಡೆಯಬೇಕು.

ತಾಪಾಘಾತವು ( Heatstroke ವೈದ್ಯಕೀಯ ತುರ್ತು ಸಂದರ್ಭವಾಗಿದೆ
ಈ ಕೆಳಗಿನ ಚಿಹ್ನೆಗಳು ಅಪಾಯಕಾರಿಯಾಗಿದ್ದು, ಇವುಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯಕೀಯ ನೆರವನ್ನು ಪಡೆಯಿರಿ.
ವಯಸ್ಕರಲ್ಲಿ
• ಅರೆ ಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ದ್ವಂದ್ವ. ಗಾಬರಿಗೊಳ್ಳುವುದು ಅಥವಾ ಕೋಮಾ ಸ್ಥಿತಿಯನ್ನು ತಲುಮವುದು.
• ಬಿಸಿ ಹಾಗೂ ಕೆಂಪಾದ ಬಗು ಚರ್ಮ
• ದೇಹದ ಉಷ್ಣತೆ ≥40ಡಿ.ಸೆ ಅಥವಾ 104 ಡಿ.ಸೆ
• ಆತಿಯಾಗಿ ನಡಿಮಿಡಿಯೊಳುವುದು.
• ಕನಿಷ್ಠ ಮೂತ್ರ ವಿಸರ್ಜನೆಯ ಪ್ರಮಾಣ
• ಅತಿಯಾದ (Throbbing) ತಲೆನೋವು
• ಬಾಯಿ ಒಣಗುವಿಕೆ ಹಾಗೂ ಗುಳಿ ಬಿದ್ದ ಕಣ್ಣುಗಳು
• ಆತಂಕ, ತಲೆಸುತ್ತುವಿಕೆ ಹಾಗೂ ಪ್ರಜ್ಞೆ ತಪ್ಪುವುದು
• ಮಾಂಸ ಖಂಡಗಳಲ್ಲಿ ಸುಸ್ತು ಅಥವಾ ಸೆಳೆತ
• ಆಲಸ್ಯ / ಅರೆ ಪ್ರಜ್ಞಾವಸ್ಥೆ
• ಮೂರ್ಛ ಹೋಗುವುದು
• ವಾಕರಿಕೆ ಮತ್ತು ವಾಂತಿ
• ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ
• ಹೆಚ್ಚಿದ ಹೃದಯದ ಬಡಿತ/ ವೇಗವಾದ ಉಸಿರಾಟ
• ಸಹಾಯಕ್ಕೆ ಕಾಯುತ್ತಿರುವ ಅವಧಿಯಲ್ಲಿ ವ್ಯಕ್ತಿಯ ದೇಹದ ಉಷಾಂಶವನ್ನು ಈ ಕೆಳಕಂಡ ವಿಧಾನದಲ್ಲಿ ಕಡಿಮೆಗೊಳಿಸಿ
ಮಕ್ಕಳಲ್ಲಿ:-
• ಆಹಾರ ಸೇವಿಸಲು ನಿರಾಕರಿಸುವುದು
• ದೇಹದ ಭಾಗಗಳಿಗೆ ಹಾಗೂ ಬಟ್ಟೆ ಮೇಲೆ ತಣ್ಣಗಿನ ನೀರನ್ನು ಹಾಕುವುದು.
• ಹಾಗೂ ವ್ಯಕ್ತಿಯ ದೇಹದ ಮೇಲೆ ಹೆಚ್ಚು ಗಾಳಿಯನ್ನು ಬೀಸುವುದು
• ಬಾಯಿ ಒಣಗುವಿಕೆ ಹಾಗೂ ಗುಳಿ ಬಿದ್ದ ಕಣ್ಣುಗಳು
• ಆಲಸ್ಯ/ ಅರೆ ಪ್ರಜ್ಞಾವಸ್ಥೆ
• ಮೂರ್ಛೆ ಹೋಗುವುದು
• ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ
ಸಹಾಯಕ್ಕಾಗಿ ಕಾಯುತ್ತಿರುವ ಅವಧಿಯಲ್ಲಿ ವ್ಯಕ್ತಿಯ ದೇಹದ ಉಷ್ಣವನ್ನು ಈ ಕೆಳಕಂಡ ವಿಧಾನದಲ್ಲಿ ಕಡಿಮೆಗೊಳಿಸಿ:-
• ಸಾಧ್ಯವಿದ್ದಲ್ಲಿ ತಂಪಾದ ಪ್ರದೇಶಕ್ಕೆ ಸ್ಥಳಾಂತರಗೊಳಿಸಿ,
• ದೇಹದ ಭಾಗಗಳಿಗೆ ಹಾಗೂ ಬಟ್ಟೆ ಮೇಲಿನ ತಣ್ಣಗಿನ ನೀರನ್ನು ಹಾಕುವುದು,
• ಹಾಗೂ ವ್ಯಕ್ತಿಯ ದೇಹದ ಮೇಲೆ ಹೆಚ್ಚು ಗಾಳಿಯನ್ನು ಬೀಸುವುದು
• ಯಾರಾದರೂ ಹೆಚ್ಚಿದ ದೇಹದ ಉಷ್ಣಾಂಶ ಹಾಗೂ ಪ್ರಜ್ಞೆ ತುವುದು, ಗೊಂದಲದಲ್ಲಿದ್ದು, ಬೆವರುವಿಕೆಯು ಸ್ಥಗಿತವಾಗಿದ್ದರೆ ತಕ್ಷಣವೇ 108/102 ಗೆ ಕರೆ ಮಾಡಬಹುದು.