ಚಿಕ್ಕಮಗಳೂರು-ಕಂದಾಯ ಭೂಮಿ ಅರಣ್ಯಕ್ಕೆ ವರ್ಗಾಯಿಸದಿರಲು ಒತ್ತಾಯ-ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ.ರವೀಶ್ ರಿಗೆ ಮನವಿ ಸಲ್ಲಿಸಿದ ಕರವೇ ಮುಖಂಡರು

ಚಿಕ್ಕಮಗಳೂರು, ಮೇ.26:- ಸರ್ಕಾರ ವಿಧಿಸಿರುವ ಶುಲ್ಕಕ್ಕಿಂತ ಅಧಿಕ ಪಡೆಯುವ ಖಾಸಗೀ ಶಾಲೆ ಗಳ ವಿರುದ್ಧ ಶಿಸ್ತು ಕೈಗೊಳ್ಳಬೇಕು ಎಂದು ಕರವೇ ಮುಖಂಡರುಗಳು ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ.ರವೀಶ್ ಅವರಿಗೆ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಕೆಂಪನಹಳ್ಳಿ ಅಶೋಕ್ ವಿದ್ಯಾರ್ಥಿಗಳ ಸಮಗ್ರ ವಿದ್ಯಾಭ್ಯಾಸ ಕ್ಕಾಗಿ ಪಾಲಕರು ಅನೇಕ ಕಷ್ಟಗಳು ನಡುವೆ ಖಾಸಗೀ ಶಾಲೆಗಳನ್ನು ಸೇರಿಸುತ್ತಿದ್ದಾರೆ. ಆದರೆ ಕೆಲವು ಶಾಲೆ ಗಳು ಅಧಿಕ ಶುಲ್ಕ, ಸಮವಸ್ತ್ರವನ್ನು ಕಡ್ಡಾಯವಾಗಿ ಶಾಲೆಗಳಲ್ಲೇ ತೆಗೆದುಕೊಳ್ಳಬೇಕಿದೆ ಎಂದು ಒತ್ತಾಯಿಸುತ್ತಿವೆ ಎಂದರು.

ಭವಿಷ್ಯದ ಪ್ರಜೆಗಳಾಗಿ ರೂಪುಗೊಳ್ಳುವ ಮಕ್ಕಳಿಗೆ ಶಾಲೆಗಳಲ್ಲಿ ಪರಿಣಿತ ಶಿಕ್ಷಕರನ್ನು ನೇಮಿಸಿಕೊಳ್ಳುತ್ತಿಲ್ಲ. ಜೊತೆಗೆ ಬಡ ಮತ್ತು ಕೂಲಿ ಕಾರ್ಮಿಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಕೊಡಿಸಲು ಬಹುದೊಡ್ಡ ಕನಸಾಗಿದೆ ಎಂದು ಹೇಳಿದರು.

ಆದ್ದರಿಂದ ತಾಲ್ಲೂಕಿನ ಯಾವುದೇ ಖಾಸಗೀ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಅಧಿಕ ಶುಲ್ಕ ವಿಧಿಸುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪರಿಣಿತ ಶಿಕ್ಷಕರನ್ನು ಕಡ್ಡಾಯವಾಗಿ ನೇಮಿಸು ವಂತೆ ಸೂಚಿಸಬೇಕು ಎಂದು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಕುಮಾರ್ ಆರ್. ಶೆಟ್ಟಿ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಪೂರ್ಣಿಮಾ, ನಗರಾಧ್ಯಕ್ಷೆ ಮಂಜುಳಾಬಾಯಿ, ಮುಖಂಡರು ಗಳಾದ ಮಂಜುನಾಥ್, ಇಮ್ರಾನ್, ರಾಧಾ, ರಂಜಿತ ಮತ್ತಿತರರಿದ್ದರು.

– ಸುರೇಶ್‌ ಎನ್.

Leave a Reply

Your email address will not be published. Required fields are marked *