ಕೆ.ಆರ್.ಪೇಟೆ,ಜೂ.01: ರಾಜ್ಯದ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ರವರ ಹುಟ್ಟುಹಬ್ಬವನ್ನು ಗಿಡ ನೆಟ್ಟು ನೀರುಣಿಸಿ, ಸರ್ಕಾರಿ ಆಸ್ಪತ್ರೆಯ ಎಲ್ಲ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಾಲೂಕಿನ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್ ನೇತೃತ್ವದಲ್ಲಿ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ತಾಲೂಕು ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಬಿ.ನಾಗೇಂದ್ರಕುಮಾರ್ ಅವರು ಎನ್.ಚೆಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಸಧೃಢವಾಗಿ ಬೆಳೆಯುತ್ತಿದೆ. ಚೆಲುವಣ್ಣ ಅವರ ನೇತೃತ್ವದಲ್ಲಿ ನಡೆದ ಪದವೀಧರ ಕ್ಷೇತ್ರದಲ್ಲಿ ಮಧು.ಜಿ.ಮಾದೇಗೌಡ ಹಾಗೂ ಸ್ಥಳೀಯ ಸಂಸ್ಥೆಗಳಿAದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ದಿನೇಶ್ ಗೂಳೀಗೌಡರು ಭರ್ಜರಿ ಗೆಲುವು ಸಾಧಿಸಿದರು.

ಜೊತೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 7ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಚೆಲುವರಾಯಸ್ವಾಮಿ ಅವರ ಪರಿಶ್ರಮ ಅಪಾರವಾಗಿದೆ. ಸದಾ ಕ್ರಿಯಾಶೀಲವಾಗಿ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಚೆಲುವರಾಯಸ್ವಾಮಿ ಅವರು ಕೆ.ಆರ್.ಪೇಟೆ ಮತ್ತು ನಾಗಮಂಗಲ ಎರಡು ಕಣ್ಣುಗಳಿದ್ದಂತೆ ನೋಡಿಕೊಂಡು ನಮ್ಮ ತಾಲ್ಲೂಕಿನಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎಂಬ ಕೊರಗನ್ನು ದೂರ ಮಾಡುವ ರೀತಿಯಲ್ಲಿ ಕಾರ್ಯಕರ್ತರಿಗೆ ಸ್ಪಂಧಿಸುವ ಕೆಲಸ ಮಾಡುತ್ತಿದ್ದಾರೆ. ಯಾರೇ ಕಾರ್ಯಕರ್ತರು ಹೋದರು ಸಹ ಅವರಿಗೆ ನಿರಾಸೆ ಮಾಡದೇ ಅವರ ಕಷ್ಟ ಸುಖಗಳಿಗೆ ಸ್ಪಂಧಿಸುತ್ತಿದ್ದಾರೆ.

ಇಂತಹ ನಾಯಕರು ನಮಗೆ ಅಗತ್ಯವಾಗಿದ್ದಾರೆ. ಹಾಗಾಗಿ ಚೆಲುವರಾಯಸ್ವಾಮಿ ಅವರಿಗೆ ಆ ದೇವರು ಆಯಸ್ಸು, ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ, ನಮ್ಮಂತರ ಕಾರ್ಯಕರ್ತರ ಧ್ವನಿಯಾಗಿ ವಿಧಾನಸಭೆಯಲ್ಲಿ ಕೆಲಸ ಮಾಡಲಿ ಮುಂದೊಂದು ದಿನ ಸಿ.ಎಂ.ಆಗಿ ರಾಜ್ಯದ ಚುಕ್ಕಾಣಿ ಹಿಡಿಯುವ ಅವಕಾಶಗಳು ಕೂಡಿ ಬರಲಿ ಎಂದು ನಾಡದೇವತೆ ತಾಯಿ ಚಾಮುಂಡೇಶ್ವರಿಯಲ್ಲಿ ನಾಗೇಂದ್ರಕುಮಾರ್ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶ್ರೀಕಾಂತ್, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಕೆಯುಐಡಿಎಫ್ಸಿ ನಿಗಮದ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷ ಎ.ಎಸ್.ರಮೇಶ್, ತಾಲ್ಲೂಕು ಚೆಲುವರಾಯಸ್ವಾಮಿ ಅಭಿಮಾನಿ ಬಳಗದ ಅಧ್ಯಕ್ಷ ಅಕ್ಕಿ ಮಂಜು, ಉಪಾಧ್ಯಕ್ಷ ಎಂ.ಕಾಂತರಾಜು, ನಾರಾಯಣಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಕಿಹೆಬ್ಬಾಳು ದಿವಾಕರ್, ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲೋಲಾಕ್ಷಿಜಗದೀಶ್, ತಾಲ್ಲೂಕು ಕಾಂಗ್ರೆಸ್ ಎಸ್.ಸಿ.ವಿಭಾಗದ ಅಧ್ಯಕ್ಷ ರಾಜಯ್ಯ, ಕಾಂಗ್ರೆಸ್ ಸೇವಾದಳ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಕುಮಾರ್, ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಶಿವಮ್ಮ, ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಪಿ.ಎಲ್.ಡಿ.ಬ್ಯಾಂಕ್ ನಿರ್ದೇಶಕ ಲಕ್ಷ್ಮಿಪುರ ಚಂದ್ರೇಗೌಡ, ತಾಲ್ಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ಇಲ್ತಿಯಾಜ್ ಅಹಮದ್, ಇಲಿಯಾಸ್ ಪಾಷಾ, ಸಯ್ಯದ್ ಜಮೀಲ್, ಕೃಷಿ ಸಚಿವರ ಆಪ್ತ ಸಹಾಯಕ ಕಾರ್ಯದರ್ಶಿ ಚೇತನಾಮಹೇಶ್, ವಿಜಯ್ ರಾಮೇಗೌಡರ ಆಪ್ತ ಸಹಾಯಕ ಬಸವರಾಜು ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಹಲವಾರು ಚೆಲುವರಾಯಸ್ವಾಮಿ ಅಭಿಮಾನಿಗಳು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.