ಚಿಕ್ಕಮಗಳೂರು-ಸಾಹಿತಿ ವೆಂಕಟೇಶ್‌ಮೂರ್ತಿಗೆ ಕಸಾಪ ಶ್ರದ್ದಾಂಜಲಿ ಸಲ್ಲಿಕೆ

ಚಿಕ್ಕಮಗಳೂರು, ಜೂನ್ 01: ಕವಿ, ಸಾಹಿತಿ ಹೆಚ್.ಎಸ್.ವೆಂಕಟೇಶಮೂರ್ತಿ ಇತ್ತೀಚೆಗೆ ನಿಧನ ಹಿನ್ನೆ ಲೆಯಲ್ಲಿ ಶನಿವಾರ ಜಿಲ್ಲಾ ಕಸಾಪ ಪದಾಧಿಕಾರಿಗಳು ಪ್ರವಾಸಿ ಮಂದಿರದಲ್ಲಿ ಶ್ರದ್ದಾಂಜಲಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಸ್ವಾಗತ ಸಮಿತಿ ಅಧ್ಯಕ್ಷೆ ರೇಖಾ ಹುಲಿಯ ಪ್ಪಗೌ, ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್, ತಾಲ್ಲೂಕು ಅಧ್ಯಕ್ಷ ಮಾವಿನಿಕೆರೆ ದಯಾನಂದ್, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ, ನಗರಾಧ್ಯಕ್ಷ ಸಚಿನ್‌ಸಿಂಗ್, ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇ ಗೌಡ, ಕನ್ನಡದ ಕಟ್ಟಾಳುಗಳಾದ ರೂಪನಾಯ್ಕ್, ಗುರುವೇಶ್, ಬಿಸಲೇಹಳ್ಳಿ ಸೋಮಶೇಖರ್, ಎ.ಎನ್. ಮೂರ್ತಿ, ಅನಿಲ್‌ಆನಂದ್ ಮತ್ತಿತರರು ಹಾಜರಿದ್ದರು. ಮುಖ್ಯಶಿಕ್ಷಕ ಎಸ್.ಎಂ.ಮಲ್ಲೇಶಪ್ಪ, ತಾಲ್ಲೂಕು ಅಧ್ಯಕ್ಷ ಮಾವಿನಕೆರೆ ದ ಯಾನಂದ್, ನಿಕಟಪೂರ್ವ ಅಧ್ಯಕ್ಷ ಬಿಸಲೇಹಳ್ಳಿ ಸೋಮಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ವಿಜಯ ಲಕ್ಷ್ಮಿ, ಪತ್ರಕರ್ತ ರಮೇಶ್ ನಾರಿನಿಂಗಜ್ಜಿ ಮತ್ತಿತರರು ಉಪಸ್ಥಿತರಿದ್ದರು.

  • ಸುರೇಶ್‌ ಎನ್.

Leave a Reply

Your email address will not be published. Required fields are marked *