ತುಮಕೂರು: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಮಕೂರು ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಭೀಮಸಂದ್ರ ವಲಯದ ಹಾಲನೂರು ಗ್ರಾಮದಲ್ಲಿ ಗಿಡ ನಾಟಿ ಮತ್ತು ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಶಶಿಕಲಾ ರವರು ಉದ್ಘಾಟಿಸಿದರು.
ಪ್ರಾಸ್ತವಿಕವಾಗಿ ಕೃಷಿ ಮೇಲ್ವಿಚಾರಕ ರಾಘವೇಂದ್ರ ರವರು ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ.ಪೂಜ್ಯ ಡಾ||.ಡಿ.ವೀರೇಂದ್ರಹೆಗ್ಗಡೆರವರು ಭೂಮಿ ತಾಯಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಿ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಪ್ರತಿ ವರ್ಷ 10 ಲಕ್ಷ ಹಣ್ಣು ಹಂಪಲು ಸಸಿಗಳನ್ನು ನೆಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಜಮುನಾ, ಶಿಕ್ಷಕ ಇಂದಿರಾದೇವಿ, ಮಂಜುನಾಥ್, ವಲಯ ಮೇಲ್ವಿಚಾರಕ ಸುದರ್ಶನ್, ಸೇವಾಪ್ರತಿನಿಧಿ ಶ್ರೀಮತಿ ಮಂಜುಳಾ, ಒಕ್ಕೂಟದ ಪದಾಧಿಕಾರಿಗಳು ಶಾಲಾ ಶಿಕ್ಷಕರು ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ