ಕೆ.ಆರ್.ಪೇಟೆ,ಜೂ.07: ತಾಲ್ಲೂಕಿನ ಕೊರಟೀಕೆರೆ ಗ್ರಾಮ ದೇವತೆ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ಜಾತ್ರೆ ಹಾಗೂ ಊರಹಬ್ಬವು ಜೂನ್ 9ರಿಂದ 14ರ ವರೆಗೆ ನಡೆಯಲಿದ್ದು 12ನೇ ತಾರೀಖಿನಂದು ಧಾರ್ಮಿಕ ಸಮ್ಮೇಳನ ನಡೆಯಲಿದೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾಮದ ಮುಖಂಡರಾದ ಗೋವಿಂದರಾಜು ಮನವಿ ಮಾಡಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋವಿಂದರಾಜು ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

ಜೂನ್ 12ರಂದು ಗ್ರಾಮದಲ್ಲಿ 12 ವರ್ಷಗಳ ನಂತರ ನಡೆಯುತ್ತಿರುವ ದೊಡ್ಡಹಬ್ಬದ ಧಾರ್ಮಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠ ಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ. ಡಾ.ನಿರ್ಮಲಾನಂದನಾಥ ಸ್ವಾಮೀಜಿ, ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ ಅಜ್ಜಯ್ಯನವರು, ಹಂಪಿ ಹೇಮಕೂಟದ ಶ್ರೀ ದಯಾನಂದಪುರಿ ಸ್ವಾಮೀಜಿಗಳು, ಮಂಡ್ಯದ ವಿಶ್ವಮಾನವ ಕ್ಷೇತ್ರದ ಶ್ರೀ. ಪುರುಷೋತ್ತಮಾನಂದ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ. ನಿಶ್ಚಲಾನಂದನಾಥ ಸ್ವಾಮೀಜಿ, ಬೆಡದಹಳ್ಳಿಯ ಶ್ರೀ ಪಂಚಭೂತೇಶ್ವರ ಮಠದ ಶ್ರೀ. ರುದ್ರಮುನಿ ಸ್ವಾಮೀಜಿ ಸೇರಿದಂತೆ ಶಾಸಕ ಹೆಚ್.ಟಿ. ಮಂಜು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರದ ಸಚಿವರು ಮಾಜಿ ಮುಖ್ಯ ಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಮಾಜ ಸೇವಕರಾದ ಮಲ್ಲಿಕಾರ್ಜುನ್, ರಾಜ್ಯದ ಮಾಜಿ ಸಚಿವರಾದ ನಾರಾಯಣಗೌಡ, ಸಿ.ಎಸ್. ಪುಟ್ಟರಾಜು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು 12ವರ್ಷಗಳ ನಂತರ ನಡೆಯುತ್ತಿರುವ ಊರ ಹಬ್ಬದಲ್ಲಿ ಭಾಗವಹಿಸುತ್ತಿದ್ದು ಪ್ರತಿ ದಿನವೂ ಒಂದೊಂದು ವಿಶೇಷ ಪೂಜಾ ಕಾರ್ಯಕ್ರಮಗಳು, ಹೋಮ, ಹವನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಊರಹಬ್ಬದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಗೋವಿಂದರಾಜು ಮನವಿ ಮಾಡಿದರು.

ಪತ್ರಿಕಾಗೋಷ್ಟಿಯಲ್ಲಿ ಮುಖಂಡ ಗ್ಯಾಸ್ ರಾಜಶೇಖರ್, ಗ್ರಾಮದ ಮುಖಂಡರಾದ ಕೃಷ್ಣೇಗೌಡ, ಅಶೋಕ್, ವಿಶ್ವನಾಥ್, ಮೋಹನ್.ಕೆ.ಎನ್, ಕುಮಾರ. ಕೆ.ಎಸ್,ಶಿವಸ್ವಾಮಿ, ಚಂದ್ರಶೇಖರ್, ಪುನೀತ್ ಕುಮಾರ್, ಹರೀಶ್. ಕೆ.ವಿ, ಕೆ.ಜೆ.ರಂಗಪ್ಪ, ಕೆ.ಆರ್.ಮಹೇಶ್, ಪ್ರೇಮ್ಕುಮಾರ್, ಮಂಜುನಾಥ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
– ಶ್ರೀನಿವಾಸ್ ಆರ್.