ತುಮಕೂರು-ಸಂಪಾದಕರ ಸಂಘದ ದತ್ತಿ ನಿಧಿಗೆ 50 ಸಾವಿರ ರೂ. ಚೆಕ್ ಹಸ್ತಾಂತರ

ತುಮಕೂರು: ಮಾಚಿ ಪತ್ರಿಕೆಯ ಸಂಪಾದಕರು, ವಿಜಯ ಮುಗಿಲು ಕನ್ನಡ ದಿನಪತ್ರಿಕೆ ಉಪ ಸಂಪಾದಕರಾದ ಹನುಮಂತಪ್ಪ ಅವರು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘಕ್ಕೆ ದತ್ತಿನಿಧಿಯಾಗಿ 50 ಸಾವಿರ ರೂ.ಗಳನ್ನು ಠೇವಣಿ ಇಟ್ಟಿದ್ದು, ಚೆಕ್‌ನ್ನು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ ಮತ್ತು ಜಿಲ್ಲಾಧ್ಯಕ್ಷ ಜಿ.ಕರುಣಾಕರ ಅವರಿಗೆ ಹಸ್ತಾಂತರಿಸಿದರು.

ಈ ವೇಳೆ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಸಿ.ರಂಗನಾಥ್, ಜಿಲ್ಲಾ ಉಪಾಧ್ಯಕ್ಷ ಪಿ.ಎಸ್.ಮಲ್ಲಿಕಾರ್ಜುನಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎನ್.ಮಂಜುನಾಥಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ.ಎನ್.ಮಹೇಶ್ ಕುಮಾರ್ ಹಾಜರಿದ್ದರು.

– ಕೆ.ಬಿ.ಚಂದ್ರಚೂಡ

Leave a Reply

Your email address will not be published. Required fields are marked *