ಚಿಕ್ಕಮಗಳೂರು- ಕ್ರೀಡಾಭಿಮಾನಿಗಳ ಸಾವು-ಸಿಎಂ, ಡಿಸಿಎಂ ರಾಜೀನಾಮೆಗೆ ಪ್ರತಿಭಟನೆ

ಚಿಕ್ಕಮಗಳೂರು, ಜೂನ್ 06:– ಆಡಳಿತ ವೈಫಲ್ಯದಿಂದ ಆರ್‌ಸಿಬಿ ಕ್ರಿಕೇಟ್ ಅಭಿಮಾನಿಗಳ ಧಾರುಣ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಮಂಡಲದಿಂದ ಶುಕ್ರವಾರ ಆಜಾದ್ ಪಾರ್ಕ್ ವೃತ್ತದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಾಂಚಜನ್ಯ ಕಚೇರಿಯಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಕೂಗುತ್ತಾ ಆಗಮಿಸಿದ ಕಾರ್ಯ ಕರ್ತರು ಸಿಎಂ ಮತ್ತು ಡಿಸಿಎಂ ಭಾವಚಿತ್ರಕ್ಕೆ ಬೆಂಕಿಹಿಟ್ಟು ಆಕ್ರೋಶ ಹೊರಹಾಕಿದರು. ಬಳಿಕ ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿಗಾಗಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್ ಆರ್‌ಸಿಬಿ ವಿಜಯೋತ್ಸವದ ಲ್ಲಿ ರಾಜ್ಯಸರ್ಕಾರ ಸೂಕ್ತ ಬಂದೋಬಸ್ತ್ ಮಾಡದೇ ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡಿರುವ ಪರಿ ಣಾಮ 11 ಮಂದಿ ಕ್ರೀಡಾಭಿಮಾನಿಗಳು ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದು ಆ ಕುಟುಂಬವು ನೋವಿನ ಸಾಗರದಲ್ಲಿ ಮುಳುಗಲು ರಾಜ್ಯಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.

ಕುಂಭಮೇಳದ ಬಗ್ಗೆ ಟೀಕಿಸುವ ಮುಖ್ಯಮಂತ್ರಿಗಳು ರಾಜಧಾನಿಯಲ್ಲಿ ಗುಪ್ತಚರ ಮಾಹಿತಿಗಳಿದ್ದರೂ ಸಮಾರಂಭ ನಡೆಸಿದ್ದಾರೆ. ಈ ಪ್ರಕರಣದಿಂದ ನುಚುಚಿಕೊಳ್ಳಲು ಅಮಾಯಕ ಪೊಲೀಸ್ ಅಧಿಕಾರಿಗಳನ್ನು ಹೊಣೆಯಾಗಿಸಲು ಮುಂದಾಗಿರುವುದು ನಾಚಿಕೇಡಿನ ಸಂಗತಿ ಎಂದರು.

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೊಟ್ಯಾನ್ ಮಾತನಾಡಿ ಕ್ರೀಡಾಭಿಮಾನಿಗಳ ಸಾವು ಮುಚ್ಚಿಹಾಕಲು ಸಿಬಿಐ, ನ್ಯಾಯಾಧೀಶರ ತನಿಖೆಗೆ ಒಳಪಡಿಸುತ್ತೇವೆಂಬ ಬೂಟಾಟಿಕೆ ಮಾಡಿಕೊಂಡಿರುವ ರಾಜ್ಯಸರ್ಕಾರ ಕೊನೆಯದಾಗಿ ಯಾವುದೇ ದಾರಿ ತೋಚದೇ ನೇರವಾಗಿ ರಾಜ್ಯದ ನಿಷ್ಟಾವಂತ ಪೊಲೀಸ್ ಅಧಿಕಾರಿಗಳನ್ನು ಹೊಣೆಯಾಗಿಸಿ ಕೈತೊಳೆದುಕೊಳ್ಳುತ್ತಿದೆ ಎಂದು ದೂರಿದರು.

ದೇಶದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ಸ್ಥಾನಮಾನವಿದೆ. ಆದರೆ ರಾಜ್ಯದ ಸಿಎಂ ಮತ್ತು ಡಿಸಿಎಂ ಪೊಲೀಸರ ಆತ್ಮಸ್ಥೆöÊರ್ಯ ಕುಗ್ಗಿಸಲು ಸರ್ಕಾರ ಮಾಡಿದ ತಪ್ಪನ್ನು ಪೊಲೀಸರಿಗೆ ಹೊರಿಸುವುದು ನ್ಯಾಯಸ ಮ್ಮತವಲ್ಲ. ಈ ಮೊದಲೇ ಗುಪ್ತಚರ ಇಲಾಖೆ ಸಮಾರಂಭ ನಡೆಸದಂತೆ ಮಾಹಿತಿ ರವಾನಿಸಿದ್ದರೂ ಲೆಕ್ಕಿ ಸದೇ ವಿಜಯೋತ್ಸವ ಆಚರಿಸಿ ಅಮಾಯಕರ ಸಾವಿಗೆ ಕಾರಣವಾಗಿದೆ ಎಂದರು.

ಅಂದಿನ ವಿಜಯೋತ್ಸವ ಸಮಾರಂಭವು ಜನಸಾಮಾನ್ಯರಿಗಲ್ಲ. ಸಚಿವರು ಮತ್ತು ಶಾಸಕರ ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದವರನ್ನು ಒಲೈಸಲು ಹಾಗೂ ಸೆಲ್ಪಿ ಪೋಟೋ ಕಿಕ್ಲಿಸಿಕೊಳ್ಳಲು ಎಂಬುದು ವೇದಿಕೆಗಳಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಹೀಗಾಗಿ ಈ ಸಾವಿಗೆ ಕಾರಣರಾದ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ನಗರ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ್, ಕೌಶಿಕ್, ಜಿ.ಪಂ. ಮಾಜಿ ಉಪಾಧ್ಯಕ್ಷ ಸೋಮಶೇಖರ್, ಮುಖಂಡರುಗಳಾದ ಕೋಟೆ ರಂಗನಾಥ್, ದಿನೇಶ್, ಈಶ್ವರಹಳ್ಳಿ ಮಹೇಶ್, ನೆಟ್ಟೆಕೆರೆಹಳ್ಳಿ ಜಯಣ್ಣ, ಸಚಿನ್‌ಗೌಡ, ಕೆ.ಸಿ.ನಿಶಾಂತ್, ಕೋಟೆ ಪ್ರದೀಪ್, ಸತೀಶ್, ಪ್ರದೀಪ್, ರೇವನಾಥ್, ಜೀವನ್, ಪವಿತ್ರ, ಬೆನಡಿಕ್ಟ್ ಜೇಮ್ಸ್, ಸಂಗೀತ ಇದ್ದರು.

– ಸುರೇಶ್‌ ಎನ್.

Leave a Reply

Your email address will not be published. Required fields are marked *