ಚಿಕ್ಕಮಗಳೂರು-ಕರವೇ ರಾಜ್ಯಾಧ್ಯಕ್ಷ ಜನ್ಮದಿನ – ದೇವಾಲಯಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು, ಜೂನ್ ೧೦:- ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ 58 ನೇ ಜನ್ಮದಿನ ಅಂಗವಾಗಿ ಕರವೇ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ನಗರದ ಶ್ರೀ ಬೋಳ ರಾಮೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆರೋಗ್ಯ, ಆಯುಷ್ಯ ಲಭಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಕೆಂಪನಹಳ್ಳಿ ಅಶೋಕ್, ಉಪಾಧ್ಯಕ್ಷ ಮಲ್ಲೇಶ್ ಕೋಟೆ, ಪ್ರಧಾನ ಕಾರ್ಯದರ್ಶಿ ಕುಮಾರ್, ಸಂಘಟನಾ ಕಾರ್ಯದರ್ಶಿ ರುದ್ರೇಶ್ ಸಿಂಹಾದ್ರಿ, ಸಂಚಾಲಕ ಮಹಮದ್ ಹನೀಫ್, ತಾಲ್ಲೂಕು ಅಧ್ಯಕ್ಷ ಮನೋಜ್, ಕಡೂರು ಅಧ್ಯಕ್ಷ ಅಶೋಕ್‌ಶೆಟ್ಟಿ, ಆಟೋಘಟಕದ ಅಧ್ಯಕ್ಷ ಇರ್ಷಾದ್ ಅಹ್ಮದ್, ಮುಖಂಡರುಗಳಾದ ಪಂಚಾಕ್ಷರಿ, ಭರತ್, ಸಾದಿಕ್ ಅಹ್ಮದ್ ಮತ್ತಿತರರು ಹಾಜರಿದ್ದರು.

  • ಸುರೇಶ್‌ ಎನ್.

Leave a Reply

Your email address will not be published. Required fields are marked *