ಚಿಕ್ಕಮಗಳೂರು, ಮೇ.30:- ವಸತಿ ಶಾಲೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ನಗರದ ಆಲ್ದೂರು ಡಾ|| ಬಿ.ಆರ್.ಅಂಭೇಡ್ಕರ್ ಬಾಲಕಿಯರ ವಸತಿ ಶಾಲೆ ನೌಕರರು ಶುಕ್ರವಾರ ಕಪ್ಪುಪಟ್ಟಿ ಧರಿಸಿ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ವಸತಿ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎನ್.ದೀಪಾ ಮಾತನಾಡಿ, ನೌಕರರಿ ಗೆ ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್ಸಿ, ಎಸ್ಟಿ, ಬಿಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು ಎಂದರು.
ನಗದು ರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಟಾನ, ಮರಣ ಮತ್ತು ನಿವೃತ್ತಿ ಉಪದಾನ ಸೌ ಲಭ್ಯ, ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ಹಾಗೂ ಹೆಚ್ಚುವರಿ ಕಾರ್ಯಾಭಾರ ಇರುವುದರಿಂದ ಶೇ.10 ವಿಶೇಷ ಭತ್ಯೆ ಮಂಜೂರಾತಿಗಾಗಿ ಜಿಲ್ಲೆಯಾದ್ಯಂತ ವಸತಿ ಶಾಲೆ ನೌಕರರು ಮುಷ್ಕರ ಕಳೆದೆರಡು ದಿನ ಗಳಲ್ಲಿ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಳಂಭ ಧೋರಣೆ ಅನುಸರಿಸಿದರೆ ಮೇ.31 ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ಕೈಗೊಂಡಿ ಮನವಿ ಸಲ್ಲಿಸಲಾಗುವುದು. ಜೂನ್ 02 ರಂದು ಜಿಲ್ಲಾಧಿಕಾರಿ ಕಚೇರಿ ಮ ತ್ತು ವಸತಿ ಶಾಲೆಗಳ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಆಲ್ದೂರು ಡಾ|| ಬಿ.ಆರ್.ಅಂಭೇಡ್ಕರ್ ಬಾಲಕಿಯರ ವಸತಿ ಶಾಲೆ ಪ್ರಾಂಶುಪಾಲ ಮಧುಸೂದನ್, ಶಿಕ್ಷಕರಾದ ಪ್ರಭುಕಮಾರ್, ನಾಗರಾಜ್, ಶೇಖ್ ತಬ್ರೀಜ್, ಹನುಮಂತಪ್ಪ ಇದ್ದರು.
- ಸುರೇಶ್ ಎನ್.