ಚಿಕ್ಕಮಗಳೂರು, ಜೂನ್ 01:- ವಚನ ಸಾಹಿತ್ಯ ಎಂಬುದು ಕೊನೆಯಿರದ ತೀರ, ಅದರಲ್ಲಿ ಮಾನವ ನೆಮ್ಮದಿ ಜೀವನಕ್ಕೆ ಅಗತ್ಯವಿರುವ ಸಂಸ್ಕಾರ, ಸಂಸ್ಕೃತಿ ಅಡಗಿದೆ. ಅದನ್ನು ಅರಿತು ಮುನ್ನಡೆದವನೆ ನಿಜ ಶರ ಣನಾಗುತ್ತಾನೆ ಎಂದು ಬಸವತತ್ವ ಪೀಠದ ಶ್ರೀ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.
ಕಲ್ಯಾಣನಗರದ ಎಂ.ಎಸ್.ಲೋಕಶಪ್ಪ ಸಭಾಂಗಣದಲ್ಲಿ ಭಾನುವಾರ ಸಂಜೆ ನಡೆದ ಎಸ್.ಎಂ.ಲೋ ಕೇಶಪ್ಪ ಮತ್ತು ಸಹೋದರರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯ ಕುರಿತು ಸಂದೇಶಗಳಿವೆ. ಮನಸ್ಸಿನಿಂದ ಮನಸ್ಸಿನ ಸಂಪರ್ಕವೇ ಅನುಭಾವ. ಅದುವೇ ವಚನದ ಜೀವಾಳ. ಮನುಷ್ಯನಿಗೆ ಜ್ಞಾನಕ್ಕಿಂತ ದೊಡ್ಡ ಸಂಪತ್ತು ಇನ್ನೊಂದಿಲ್ಲ ಎಂದು ತೋರಿಸಿಕೊಟ್ಟ ವಚನ ಸಾಹಿತ್ಯದಿಂದ ಸಮಾಜ ಕಲಿಯುವುದು ಸಾಕಷ್ಟಿದೆ ಎಂದರು.

ಸಂಸ್ಕಾರದಿಂದ ಬದುಕು ಸಾರ್ಥಕವಾಗುತ್ತದೆ. ಆಧುನಿಕತೆಯ ಭರಾಟೆಯಲ್ಲಿ ಕಳೆದು ಹೋಗುತ್ತಿರುವ ಇಂದಿನ ಪೀಳಿಗೆಯವರಿಗೆ ಸಂಸ್ಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ತಾಯಂದಿರ ಪಾತ್ರ ಮಹತ್ತರವಾಗಿದೆ. ಜೀವ ನದ ನಿಜ ಸತ್ಯ, ಅಂಕು-ಡೊಂಕುಗಳನ್ನು ತಿದ್ದಿ ಹೇಳುವುದು ಹಿರಿಯರ ಕೆಲಸ. ಅದನ್ನು ಪಾಲಿಸುವುದು, ಆಚರಣೆಗೆ ತರುವುದು ಕಿರಿಯರ ಜವಾಬ್ದಾರಿ ಎಂದು ಹೇಳಿದರು.
ಬಸವಾದಿ ಶರಣರು ತಮ್ಮ ವಚನ ಸಾಹಿತ್ಯದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯನ್ನು ಕೊಟ್ಟು ಕನ್ನಡ ಭಾಷೆಯ ಹಿರಿಮೆ ಗರಿಮೆ ಹೆಚ್ಚಿಸಿದರು. ವಚನಗಳಲ್ಲಿ ಜೀವನ ಮೌಲ್ಯ ಅಡಗಿದೆ ಮತ್ತು ಅದರಿಂದ ತಿಳಿಯುವುದು ಪ್ರಸ್ತುತ ಸಮಾಜದ ಬಹಳಷ್ಟಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿ.ಪಂ. ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಮಾತೃ ಭಾಷೆಯಿಂದಲೇ ಭಾವನೆ, ಸಂತಸ ಹಾಗೂ ವಿಚಾರಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಸಾಧ್ಯ. ಆ ನಿಟ್ಟಿ ನಲ್ಲಿ ಇಂದು 100ನೇ ದತ್ತಿ ಉಪನ್ಯಾಸ ವೈವಿದ್ಯಮ ಮತ್ತು ವಿಶೇಷವಾಗಿ ಆಚರಿಸುತ್ತಿರುವುದು ಸಂತಸ ಸಂ ಗತಿ ಎಂದರು.

ಸಾಹಿತಿ ಬಿ.ತಿಪ್ಪೇರುದ್ರಪ್ಪ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಹಣದಾಸೆಯಿಂದ ಗುಣ, ನಡವಳಿಕೆ, ಆ ಚಾರ-ವಿಚಾರಗಳು ಅಪಮೌಲ್ಯವಾಗುತ್ತಿದೆ. ಧರ್ಮದ ಹೆಸರಿನಲ್ಲಿ ಮತಾಂತಧೆ ತಾಂಡವ, ಮಾನವೀಯ ನೆಲೆ ಹಾಗೂ ಮನುಷ್ಯತ್ವ ನಶಿಸುತ್ತಿದ್ದು ಇವುಗಳನ್ನು ಮರಕಳಿಸುವಲ್ಲಿ ವಚನ ಸಾಹಿತ್ಯಗಳು ಪೂರಕವಾಗಿದೆ ಎಂದು ತಿಳಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ ಪರಿಷತ್ ಈಗಾಗಲೇ ವೇದಿಕೆಗಳಲ್ಲಿ ಕಾರ್ಯಕ್ರ ಮ ಆಯೋಜಿಸುವ ಜೊತೆಗೆ ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಲು ಶಾಲಾ-ಕಾಲೇಜುಗಳಲ್ಲಿ ಕಾರ್ಯಾಗಾ ರ ಹಮ್ಮಿಕೊಂಡಿದೆ ಎಂದ ಅವರು ಬಾಲ್ಯದಿಂದಲೇ ಎಳೆಮನಸ್ಸಿಗೆ ಕನ್ನಡಕಂಪು ರಸದೌತಣ ಉಣಬಡಿಸಿ ದರೆ ಭವಿಷ್ಯದಲ್ಲಿ ಹೆಮ್ಮರವಾಗಿ ಬೆಳೆದು ನೂರಾರು ಯುವಕವಿಗಳಿಗೆ ನೆರಳಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್, ಪ್ರಧಾನ ಸಂಚಾಲ ಕ ಎಸ್.ಎಂ.ಲೋಕೇಶಪ್ಪ, ನಿವೃತ್ತ ಮುಖ್ಯಶಿಕ್ಷಕ ಎಸ್.ಎಂ.ಮಲ್ಲೇಶಪ್ಪ, ತಾಲ್ಲೂಕು ಅಧ್ಯಕ್ಷ ಮಾವಿನಕೆರೆ ದ ಯಾನಂದ್, ನಿಕಟಪೂರ್ವ ಅಧ್ಯಕ್ಷ ಬಿಸಲೇಹಳ್ಳಿ ಸೋಮಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ವಿಜಯ ಲಕ್ಷ್ಮೀ, ಪತ್ರಕರ್ತ ರಮೇಶ್ ನಾರಿನಿಂಗಜ್ಜಿ ಮತ್ತಿತರರು ಉಪಸ್ಥಿತರಿದ್ದರು.
- ಸುರೇಶ್ ಎನ್.