ಚಿಕ್ಕಮಗಳೂರು, ಜೂನ್ 10:- ಅಂಬೇಡ್ಕರ್ ವಾದಿ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ವಿಧಾನ ಪರಿಷತ್ ಸದಸ್ಯರನ್ನು ಎತ್ತಿಕಟ್ಟುತ್ತಿರುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿ ಗಳು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು ಸಚಿವ ಪ್ರಿಯಾಂಕ್ ಖರ್ಗೆಯವರ ಜನಪರ ಆಡಳಿತವನ್ನು ಸಹಿಸಿಕೊಳ್ಳದ ರಾಜ್ಯದ ಬಿಜೆಪಿ ನಾಯಕರು ಎಂ.ಎಲ್.ಸಿ.ಗಳಾದ ಛಲವಾದಿ ನಾರಾಯಣಸ್ವಾಮಿ ಮತ್ತು ಎನ್.ರವಿಕುಮಾರ್ ಎತ್ತಿಕಟ್ಟುತ್ತಿರುವುದು ನಾಚಿಕೇಡಿನ ಸಂಗತಿ ಎಂದು ಹೇಳಿದರು.
ದಲಿತ ವಿರೋಧಿ, ಅಂಬೇಡ್ಕರ್ ಸಮುದಾಯ ವಂಚಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕ್ರಮ ಕ್ಕೆ ಆಗ್ರಹಿಸುವ ಜೊತೆಗೆ ಪ್ರಿಯಾಂಕ್ ಖರ್ಗೆ ಹೆಸರಿಗೆ, ವ್ಯಕ್ತಿತ್ವಕ್ಕೆ, ಕುಟುಂಬಕ್ಕೆ ಧಕ್ಕೆ ತಂದಿರುವ ಹಾಗೂ ಜನಾಂಗಕ್ಕೆ ತಪ್ಪು ಸಂದೇಶ ರವಾನಿಸುತ್ತಿರುವ ರವಿಕುಮಾರ್, ಭಾಜಪ ಆರ್ಎಸ್ಎಸ್ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ದಸಂಸ ಬೃಹತ್ ಪ್ರತಿಭಟನೆಯನ್ನು ನಡೆಸುತ್ತಿದೆ ಎಂದರು.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ನಡೆದ ಪ್ರತಿಭಟನೆ ರ್ಯಾಲಿಯಲ್ಲಿ ಕಲಬುರ್ಗಿ ಜಿಲ್ಲಾ ಧಿಕಾರಿಗಳು ನೆರೆದೇಶದಿಂದ ಬಂದವರAತೆ ಕಾಣುತ್ತಾರೆಂದು ಅಗೌರವ, ಸಂವಿಧಾನ ವಿರೋಧಿ ಪದವನ್ನು ಬಳಸಿ, ಜನರ ಹಾಗೂ ಐಎಎಸ್ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿರುವ ವಿ.ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ಹೇಳಿದರು.
ಉತ್ತಮ ಆಡಳಿತ ನೀಡುತ್ತಿರುವ ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಜಾ ತರನುಂ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕ್ಷಮೆಯಾಚಿಸುವಂತೆ ಹೈಕೋರ್ಟ್ ತಾಕಿತೂ ಮಾಡಿದೆ. ಆದರೂ ಜವಾಬ್ದಾರಿ ಸ್ಥಾನದಲ್ಲಿರುವ ಅವರ ನಡವಳಿಕೆ ತರವಲ್ಲ. ಕೂಡಲೇ ಎಂಎಲ್ಸಿ ಸ್ಥಾನದಿಂದ ಅನರ್ಹಗೊಳಿಸಬೇ ಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ಬಳಿಕ ಬಿಜೆಪಿ ವಿಧಾನ ಪರಿಷತ್ ಸದಸ್ಯರುಗಳ ಛಲವಾದಿ ನಾರಾಯಣಸ್ವಾಮಿ ಮತ್ತು ಎನ್.ರವಿಕುಮಾರ್ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಯೋಗೀಶ್, ಸತೀಶ್, ಗಿರೀಶ್, ತಾಲ್ಲೂಕು ಸಂಚಾಲಕ ಪ್ರಸನ್ನ, ಖಜಾಂಚಿ ಸಿದ್ದಪ್ಪ, ಮಹಿಳಾ ಸಂಘಟನಾ ಸಂಚಾಲಕಿ ಸರೋಜ, ಮುಖಂ ಡರುಗಳಾದ ಚಂದ್ರು, ಉಮೇಶ್, ವಸಂತ್, ರಾಜೇಶ್, ರಘು, ಪವಿತ್ರ, ಪ್ರಮಿಳಾ ಮತ್ತಿತರರು ಹಾಜರಿದ್ದರು.
– ಸುರೇಶ್ ಎನ್.