ಚಿಕ್ಕಮಗಳೂರು, ಮೇ.10:- ಸಾಂಪ್ರದಾಯಿಕ ಕರಕುಶಲ ವಸ್ತುಗಳಲ್ಲಿ ತೊಡಗಿರುವ ಜನರನ್ನು ಬೆಂಬ ಲಿಸುವುದು ವಿಶ್ವಕರ್ಮ ಯೋಜನೆಯ ಉದ್ದೇಶವಾಗಿದ್ದು ಸ್ಥಳೀಯ ಉತ್ಪನ್ನಗಳು ಮತ್ತು ಕರಕುಶಲ ವಸ್ತು ಗಳ ಮೂಲಕ ಪ್ರಾಚೀನ ಸಂಪ್ರದಾಯಗಳನ್ನು ಜೀವಂತವಾಗಿಸುತ್ತದೆ ಎಂದು ಪಿಎಂ ವಿಶ್ವಕರ್ಮ ಯೋಜನಾ ಸಮಿತಿ ಜಿಲ್ಲಾ ಸದಸ್ಯ ಸಂತೋಷ್ ಕೋಟ್ಯಾನ್ ಹೇಳಿದರು.
ನಗರದ ಕೆ.ಎಂ.ರಸ್ತೆ ಸಮೀಪದ ಪಿಎಂ ವಿಶ್ವಕರ್ಮ ಯೋಜನಾ ತರಬೇತಿ ಕೇಂದ್ರದಲ್ಲಿ ಶುಕ್ರವಾರ ನಡೆ ದ ವಿಶ್ವಕರ್ಮ ಯೋಜನೆ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು ಭಾರತದ ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ಮರು ರೂಪಿಸುವ ಮತ್ತು ಅದರ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಒಂ ದು ಪ್ರಮುಖ ಉಪಕ್ರಮವಾಗಿದೆ. ಇದು ಕರಕುಶಲ ಉದ್ಯಮವನ್ನು ಮರುರೂಪಿಸಲು ಕೌಶಲ್ಯ ವರ್ಧನೆ ಮ ತ್ತು ಆಧುನಿಕ ತಂತ್ರಜ್ಞಾನವನ್ನು ನೀಡುತ್ತದೆ ಎಂದರು.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯವು ನಿರ್ವಹಿಸುತ್ತಿರುವ ವಿಶ್ವಕರ್ಮ ಯೋಜನೆಯು ಕಾರ್ಮಿಕರ ಕೌಶಲ್ಯಗಳನ್ನು ಹೆಚ್ಚಿಸುವ ಮೂಲಕ ಹಾಗೂ ಅವರ ಉತ್ಪನ್ನಗಳ ಗುಣಮಟ್ಟವನ್ನು ಸುಧಾರಿಸಿ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸಲು ಪ್ರಯತ್ನಿಸುತದೆ ಎಂದು ಹೇಳಿದರು.
ಬಡಗಿ, ಕಮ್ಮಾರ, ಶಿಲ್ಪಿಗಳು, ಕುಶಲಕರ್ಮಿಗಳು ಸೇರಿದಂತೆ 18 ಬಗೆಯ ಸಾಂಪ್ರದಾಯಿಕ ವೃತ್ತಿಯನ್ನು ವಿಶ್ವಕರ್ಮ ಯೋಜನೆಯಲ್ಲಿ ಒಳಗೊಂಡಿರುವವರಿಗೆ ಯೋಜನೆಯಡಿ ವಿವಿಧ ಪ್ರಯೋಜನೆಗಳು ಲಭ್ಯವಿದ್ದು ಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ಆರ್ಥಿಕ ಬೆಂಬಲವನ್ನು ನೀಡುವ ಉದ್ದೇಶದಿಂದ ರೂಪಿಸಲಾದ ಮಹತ್ವದ ಯೋಜನೆ ಇದಾಗಿದೆ ಎಂದರು.

ದೇಶಾದ್ಯಂತ ಪಿಎಂ ವಿಶ್ವಕರ್ಮ ಫಲಾನುಭವಿಗಳಿಗೆ ಮಾರುಕಟ್ಟೆ, ಬ್ರ್ಯಾಂಡಿಂಗ್, ಪ್ಯಾಕೇಜಿಂಗ್ ಇತ್ಯಾ ದಿಗಳಿಗೆ ಬೆಂಬಲವನ್ನು ನೀಡಲಾಗುತ್ತಿದೆ. ಪಿಎಂ ವಿಶ್ವಕರ್ಮ ಫಲಾನುಭವಿಗಳು ವಿವಿಧ ವ್ಯಾಪಾರ ಮೇಳ ಗಳು, ರಾಜ್ಯ ಮಟ್ಟದ ಪ್ರದರ್ಶನಗಳು ಇತ್ಯಾದಿಗಳ ಮೂಲಕ ತಮ್ಮ ಕರಕುಶಲ ವಸ್ತುಗಳು, ಉತ್ಪನ್ನಗಳ ನ್ನು ಪ್ರದರ್ಶಿಸಲು ಮತ್ತು ಮಾರಾಟ ಮಾಡಲು ಅನುಕೂಲ ಮಾಡಿಕೊಡಲಾಗಿದೆ ಎಂದರು.
ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತಮ್ಮ ಉತ್ಪನ್ನಗಳ ಮಾರಾಟವನ್ನು ಉತ್ತೇ ಜಿಸಲು ವಿವಿಧ ಇ-ಕಾಮರ್ಸ್ ವೇದಿಕೆಗಳ ಮೂಲಕ ಪಿಎಂ ವಿಶ್ವಕರ್ಮ ಫಲಾನುಭವಿಗಳಿಗೆ ಆನ್ ಲೈನ್ ಮಾರ್ಕೆಟಿಂಗ್ ಬೆಂಬಲವನ್ನು ಒದಗಿಸಲಾಗಿದ್ದು ಕ್ಷೇತ್ರದ ಸಂಸದರ ಸಹಕಾರದಿಂದ ಜಿಲ್ಲೆಯಲ್ಲಿ ಇದು ಮೊ ದಲನೇ ಹಂತದಲ್ಲಿ 4,217 ಫಲಾನುಭವಿಗಳು ಆಯ್ಕೆಯಾಗಿದ್ದು ಈ ಪೈಕಿ 1810 ಫಲಾನುಭವಿಗಳಿಗೆ ಸಾಲ ವಿತರಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಸಂಚಾ ಲಕ ರಾಕೇಶ್, ತರಬೇತಿ ಕೇಂದ್ರದ ಸಂಯೋಜಕಿ ಸಂಧ್ಯಾ ಆಚಾರ್ಯ ಉಪಸ್ಥಿತರಿದ್ದರು
– ಸುರೇಶ್ ಎನ್.