ಎಚ್.ಡಿ.ಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರ್ ಸ್ವಾಮಿ ಸರಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಆಸ್ಪತ್ರೆಯ ಸ್ವಚ್ಛತೆ, ಪ್ರಯೋಗ ಶಾಲೆ, ಹೆರಿಗೆ ಕೊಠಡಿ, ಶಸ್ತ್ರ ಚಿಕಿತ್ಸೆ ವಿಭಾಗ, ಹೊರರೋಗಿಗಳ ತಪಾಸಣೆ ಕೊಠಡಿ, ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕರೆದು, ಎಲ್ಲರೂ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಬೇಕು, ಬಯೋಮೆಟ್ರಿಕ್ ಹಾಜರಾತಿ ಯನ್ನು ಕಡ್ಡಾಯವಾಗಿ ಹಾಕಬೇಕು, ಮುಂದಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ಹೆಚ್ಚು, ಹೆಚ್ಚು ಹೆರಿಗೆಗಳು ಮಾಡಬೇಕು. ಹೆರಿಗೆ ಕೊಠಡಿಯಲ್ಲಿ EDD ಲಿಸ್ಟ್ ಅನ್ನು ಹಾಕಬೇಕು 24 ಗಂಟೆಯೂ ತುರ್ತು ವಾಹನ ಲಭ್ಯವಿರಬೇಕು, ಕಾಯಕಲ್ಪ ಅಸೆಸ್ಮೆಂಟಿಗೆ ಕ್ವಾಲಿ ಫೈ ಆಗುವಂತೆ ತಿಳಿಸಿದರು.

ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿರುವಂತೆ ನೋಡಿಕೊಂಡು, ಆಸ್ಪತ್ರೆಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಜನರಿಂದ ಯಾವುದೇ ದೂರುಗಳು ಬಾರದ ಹಾಗೆ ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಂದ ಯಾವುದಾದರೂ ದೂರುಗಳು ಬಂದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಜಿಲ್ಲಾ ಕುಷ್ಟರೋಗ ನಿರ್ಮೂಲನ ಅಧಿಕಾರಿ ಡಾ.ಬೃಂದಾ, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಆಡಳಿತ ವೈದ್ಯಾಧಿಕಾರಿ ಡಾ.ಪಾರ್ಥ ಸಾರಥಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಭಾಗ್ಯಲಕ್ಷ್ಮಿ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.
– ಶಿವಕುಮಾರ, ಕೊಟೆ.