ಚಿಕ್ಕಮಗಳೂರು, ಜೂನ್ 09:- ಕೊಟ್ಟಿಗಟ್ಟಲೇ ಆಸ್ತಿ, ಅಂತಸ್ತು ಕೂಡಿಟ್ಟರೆ ಮನಸ್ಸಿಗೆ ನೆಮ್ಮದಿ ದೊರೆ ಯುವುದಿಲ್ಲ. ಅಸಹಾಯಕರು, ಬಡವರ್ಗದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಟ್ಟರೆ ಬದುಕಿನಲ್ಲಿ ಸಂತೋಷ ತುಂಬಲಿದೆ ಎಂದು ಕರವೇ ಸ್ವಾಭಿಮಾನದ ಬಣದ ಜಿಲ್ಲಾಧ್ಯಕ್ಷ ಗುರುಮೂರ್ತಿ ಹೇಳಿದರು.
ನಗರದ ಕೋಟೆ ಸಮೀಪ ಸರ್ಕಾರಿ ನಗರ ಬಾಲಕರ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸೋಮ ವಾರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಘಟಕದಿಂದ ಉಚಿತ ನೋಟ್ಪುಸ್ತಕ, ಲೇಖನ ಸಾಮಾಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.
ಮಕ್ಕಳಿಗೆ ದಾನದ ರೂಪದಲ್ಲಿ ನೋಟ್ಪುಸ್ತಕ ವಿತರಿಸುತ್ತಿಲ್ಲ. ಬದಲಾಗಿ ಭವಿಷ್ಯದಲ್ಲಿ ವಿದ್ಯಾವಂತರಾ ಗಿ ಸಮಾಜದಲ್ಲಿ ದೊಡ್ಡವ್ಯಕ್ತಿಗಳಾಗಿ ರೂಪುಗೊಳ್ಳುವ ಉದ್ದೇಶದಿಂದ ಈ ಸಾಮಾಜಿಕ ಕಾರ್ಯಕ್ಕೆ ಮುಂದಾ ಗಿದೆ. ಹೀಗಾಗಿ ಶಾಲಾಮಕ್ಕಳು ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಭವಿಷ್ಯದಲ್ಲಿ ನೀವು ಅಸಹಾಯಕರಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.

ಯಾವುದೇ ಮನುಷ್ಯ ಕೋಟಿಗಟ್ಟಲೇ ಆಸ್ತಿಗಳಿದ್ದರೂ ಕೊನೆಗಳಿಗೆಯಲ್ಲಿ ಎಲ್ಲವನ್ನೂ ತ್ಯಜಿಸಿ ಮಣ್ಣಾ ಗಲೇಬೇಕಿದೆ. ನೈಜವಾಗಿ ಸಕಲ ಐಶ್ಚರ್ಯವಿರುವನು ಶ್ರೀಮಂತನಲ್ಲ. ಬಡವರಿಗೆ, ನೊಂದವರಿಗೆ ಸಹಾಯ ಹಸ್ತ ಚಾಚುವನೇ ನಿಜವಾದ ಶ್ರೀಮಂತ ವ್ಯಕ್ತಿ ಎಂದ ಅವರು ಮನುಜ ದುಡಿಮೆಯ ಒಂದಿಷ್ಟು ಹಣವನ್ನು ಸಮಾಜಕ್ಕಾಗಿ ಬಳಸಿದರೆ ಬದುಕು ಸಾರ್ಥಕವಾಗಲಿದೆ ಎಂದು ಹೇಳಿದರು.
ವಿದ್ಯೆಯಿಂದ ಮಾತ್ರ ಕಳೆದುಕೊಂಡಿದ್ದನ್ನು ಮರಳಿ ಪಡೆಯಲು ಸಾಧ್ಯ. ಆದ್ದರಿಂದ ಸಮಾಜದ ಮಕ್ಕ ಳು ಉನ್ನತ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು. ಪಾಲಕರು ಕೂಡಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋ ತ್ಸಾಹಿಸಬೇಕು. ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ಅನಾನುಕೂಲಕ್ಕೆ ಕರವೇ ಸದಾ ಬೆನ್ನೆಲುಬಾಗಿ ನಿಲ್ಲ ಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರವೇ ಗೌರವಾಧ್ಯಕ್ಷ ಮಂಜುನಾಥ್, ಮುಖಂಡರುಗಳಾದ ಅನಿಲ್, ಕಿರಣ್, ಹ ರ್ಷಿತ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
– ಸುರೇಶ್ ಎನ್.