ಎಚ್.ಡಿ.ಕೋಟೆ-ರಸ್ತೆ ಸುರಕ್ಷತೆಯ ಮಾಹಿತಿ‌ ನೀಡಿದ ಇನ್ಸ್ ಪೆಕ್ಟರ್ ಗಂಗಾಧರ್

ಎಚ್.ಡಿ.ಕೋಟೆ: ಪೊಲೀಸ್ ಠಾಣೆ ವ್ಯಾಪ್ತಿಯ ಟೌನ್ ಹಾಗೂ ಹ್ಯಾಂಡ್ ಪೋಸ್ಟ್ ನ ಖಾಸಗಿ ವಾಹನಗಳ ಮಾಲೀಕರು ಹಾಗೂ ಚಾಲಕರಿಗೆ ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳು ಸೇರಿದಂತೆ ಕಾನೂನು ಅರಿವಿನ ಬಗ್ಗೆ ಎಚ್.ಡಿ.ಕೋಟೆ ಪೊಲೀಸ್ ಇನ್ಸ್ ಪೆಕ್ಟರ್ ಗಂಗಾಧರ್ ಮಾಹಿತಿ ನೀಡಿದರು.

ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಬಾರದು. ವಾಹನಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಚಾಲನಾ ಪರವಾನಗಿ ಯನ್ನು ಕಡ್ಡಾಯವಾಗಿ ಜೊತೆಯಲ್ಲಿಯೇ ಇಟ್ಟು ಕೊಳ್ಳಬೇಕು. ಚಾಲಕರು ಕಡ್ಡಾಯವಾಗಿ ಯೂನಿಫಾರ್ಮ್ ಧರಿಸಬೇಕು. ಸಾರ್ವಜನಿಕರು ಹಾಗೂ ಪಾದಚಾರಿಗಳಿಗೆ ಯಾವುದೇ ತೊಂದರೆ ಆಗದಂತೆ ವಾಹನಗಳನ್ನು ನಿಲ್ಲಿಸಬೇಕು‌ ಎಂದು ತಿಳಿಸಿದರು.

ಸಾರ್ವಜನಿಕರಿಂದ ಯಾವುದೇ ದೂರು ಕೇಳಿ ಬಾರದ ರೀತಿಯಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಪ್ರಯಾಣಿಕ ರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಸಬ್ ಇನ್ಸ್ಪೆಕ್ಟರ್ ಗಳಾದ ಚಿಕ್ಕನಾಯಕ, ಸುರೇಶ ನಾಯಕ, ಸಿಬ್ಬಂದಿ ಮಹದೇವಸ್ವಾಮಿ ಸೇರಿದಂತೆ ಮತ್ತಿತರರಿದ್ದರು.

– ಶಿವಕುಮಾರ, ಕೋಟೆ.

Leave a Reply

Your email address will not be published. Required fields are marked *