ಕೆ.ಆರ್.ಪೇಟೆ-ಸಿ.ಆರ್.ಕೃಷ್ಣವೇಣಿ ಜನಾರ್ಧನ್ ಭಾರತೀಪುರ ಕ್ರಾಸ್ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ

ಕೆ.ಆರ್.ಪೇಟೆ: ತಾಲ್ಲೂಕಿನ ಭಾರತೀಪುರಕ್ರಾಸ್ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಸಿ.ಆರ್.ಕೃಷ್ಣವೇಣಿ ಜನಾರ್ಧನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದಿನ ಉಪಾಧ್ಯಕ್ಷರಾದ ಮಂಜುಳ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗಧಿಯಾಗಿತ್ತು. ಉಪಾಧ್ಯಕ್ಷ ಸ್ಥಾನ ಬಯಸಿ ಕೃಷ್ಣವೇಣಿ ಅವರನು ಹೊರತು ಪಡಿಸಿ ಬೇರೆ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದೇ ಇರುವ ಕಾರಣ ಅವಿರೋಧ ಆಯ್ಕೆ ನಡೆಯಿತು.

ಚುನಾವಣಾಧಿಕಾರಿಯಾಗಿ ಹೇಮಾವತಿ ನೀರಾವರಿ ಇಲಾಖೆಯ ನಂ.3ರ ಕಾರ್ಯಪಾಲಕ ಇಂಜಿನಿಯರ್ ಚಂದ್ರೇಗೌಡ ಕಾರ್ಯನಿರ್ವಹಿಸಿದರು. ಸಹ ಚುನಾವಣಾಧಿಕಾರಿಗಳಾಗಿ ತಾ.ಪಂ.ವ್ಯವಸ್ಥಾಪಕ ಅನಿಲ್‌ಬಾಬು, ಪಿಡಿಓ ದಿನೇಶ್‌ಕುಮಾರ್.ಬಿ. ಅವರು ಕಾರ್ಯನಿರ್ವಹಣೆ ಮಾಡಿದರು.
ನೂತನ ಉಪಾಧ್ಯಕ್ಷೆ ಕೃಷ್ಣವೇಣಿ ಜನಾರ್ಧನ್ ಅವರನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎನ್.ಕುಮಾರ್, ಸದಸ್ಯರಾದ ಬಿ.ಕೆ.ಶಿವರಾಮು, ಬಿ.ಎಸ್.ಸುನಿಲ್, ಡಿ.ಕುಬೇರ, ಕೆ.ಕೆಂಪರಾಜು, ಗೌಡಪೂಜಾನರಸಿಂಹ, ಹೆಚ್.ಟಿ.ದೇವಾಂಬ, ಲಕ್ಷö್ಮಮ್ಮ, ಹೆಚ್.ಕೆ.ಶಶಿಕಲಾ, ಕೆ.ಎನ್.ಮೋಹನ್, ಗೀತಾ, ಜಯರಾಮಯ್ಯ, ಟಿ.ಎನ್.ರುಕ್ಮಿಣಿ, ಮಂಜೇಗೌಡ, ಪಿಡಿಓ ಬಿ.ದಿನೇಶ್‌ಕುಮಾರ್ ಸೇರಿದಂತೆ ಮುಖಂಡರು ಹಾಗೂ ಗ್ರಾ.ಪಂ. ಸಿಬ್ಬಂದಿ ವರ್ಗದವರು ಅಭಿನಂದಿಸಿದರು.

ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಸಿ.ಆರ್.ಕೃಷ್ಣವೇಣಿ ಜನಾರ್ಧನ್ ಅಧಿಕಾರ ಸ್ವೀಕರಿಸಿ ಮಾತನಾಡಿ ನನ್ನನ್ನು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೃಷ್ಣವೇಣಿ ಭರವಸೆ ನೀಡಿದರು.

– ಶ್ರೀನಿವಾಸ್‌ ಆರ್.

Leave a Reply

Your email address will not be published. Required fields are marked *