ಕೆ.ಆರ್.ಪೇಟೆ- ತಂಬಾಕು ಉತ್ಪನ್ನಗಳ ಸೇವನೆ ಕ್ಯಾನ್ಸರ್ ರೋಗಕ್ಕೆ ಮೂಲ ಕಾರಣ- ಡಾ.ಶಶಿಧರ್

ಕೆ.ಆರ್.ಪೇಟೆ: ತಂಬಾಕು ಉತ್ಪನ್ನಗಳ ಸೇವನೆ ಕ್ಯಾನ್ಸರ್ ರೋಗಕ್ಕೆ ಮೂಲ ಕಾರಣವಾಗಿದೆ. ಹಾಗಾಗಿ ತಂಬಾಕು ಸೇವನೆಯಿಂದ ದೂರವಿರಿ ಎಂದು ತಾಲ್ಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶಶಿಧರ್ ಸಲಹೆ ನೀಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ. ಶಶಿಧರ್ ಅವರು ಮಾತನಾಡಿ ತಂಬಾಕು ಉತ್ಪನ್ನಗಳಾದ ಬೀಡಿ ಸಿಗರೇಟ್ ಪಾನ್ ಪರಾಗ್ ಹನ್ಸ್ ಹೊಗೆ ಸೊಪ್ಪು ಮುಂತಾದ ಹಾನಿಕಾರಕ ವಸ್ತುಗಳ ಸೇವನೆಯಿಂದ ಮನುಷ್ಯನಲ್ಲಿ ಕ್ಯಾನ್ಸರ್ ರೋಗವು ಉಂಟಾಗಲು ಕಾರಣವಾಗುತ್ತದೆ. ದೇಹದ ಎಲ್ಲಾ ಅಂಗಾಂಗಗಳು ದುರ್ಬಲಗೊಂಡು ಹಲವಾರು ರೋಗಗಳು ಉಂಟಾಗುತ್ತವೆ ಆದ್ದರಿಂದ ತಂಬಾಕು ಉತ್ಪನ್ನಗಳನ್ನು ಉಪಯೋಗಿಸದಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಅಜಿತ್, ತಜ್ಞ ವೈದ್ಯರಾದ ಡಾ.ಜಯಪ್ರಕಾಶ್ ಆರೋಗ್ಯ ನಿರಕ್ಷಣಾಧಿಕಾರಿಗಳಾದ ಧರ್ಮೇಂದ್ರ ಎಸ್ ಎಲ್ ಸತೀಶ್ ರೇಖಾ, ರಾಧಾ, ಶಿವರತ್ನಮ್ಮ ವರದರಾಜು ಮತ್ತು ಆರೋಗ್ಯ ಸಿಬ್ಬಂದಿಗಳು ಆಶಾ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

– ಶ್ರೀನಿವಾಸ್‌ ಆರ್.

Leave a Reply

Your email address will not be published. Required fields are marked *