ಕೆ.ಆರ್.ಪೇಟೆ- ಜೂನ್ 11ರಂದು ರಾಜೇನಹಳ್ಳಿ ಗ್ರಾಮದಲ್ಲಿ ಶ್ರೀ ಕಾಲಬೈರವೇಶ್ವರ ದೇವಾಲಯ ಲೋಕಾರ್ಪಣೆ ಸಮಾರಂಭ-ಡಾ.ರೇವಣ್ಣ

ಕೆ.ಆರ್.ಪೇಟೆ,ಜೂ.07: ತಾಲ್ಲೂಕಿನ ಬೂಕನಕೆರೆ ಹೋಬಳಿಯ ರಾಜೇನಹಳ್ಳಿ ಗ್ರಾಮದಲ್ಲಿ ಲೋಕರಕ್ಷಕ ಶ್ರೀ ಕಾಲಬೈರವೇಶ್ವರ ದೇವಾಲಯದ ಲೋಕಾರ್ಪಣೆ ಸಮಾರಂಭವು ಜೂನ್ 10 ಮತ್ತು 11ನೇ ತಾರೀಖು ನಡೆಯಲಿದೆ ಎಂದು ಸಮಾಜ ಸೇವಕರಾದ ಗ್ರಾಮದ ಸುಪುತ್ರ ಡಾ.ರೇವಣ್ಣ ತಿಳಿಸಿದರು.

ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾತನಾಡಿ ಮಾತನಾಡಿದರು.
ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಪೀಠಾಧ್ಯಕ್ಷ ರಾದ ಜಗದ್ಗುರು ಶ್ರೀ. ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ ಶ್ರೀ ಕಾಲಭೈರವೇಶ್ವರ ದೇವಾಲಯದ ಲೋಕಾರ್ಪಣೆ ಸಮಾರಂಭದಲ್ಲಿ ಮಂಡ್ಯದ ವಿಶ್ವಮಾನವ ಕ್ಷೇತ್ರದ ಶ್ರೀ. ಪುರುಷೋತ್ತಮಾನಂದ ಸ್ವಾಮೀಜಿ, ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ.ಪುರುಷೋತ್ತಮಾ ನಂದ ಸ್ವಾಮೀಜಿಗಳು ಭಾಗವಹಿಸುತ್ತಿದ್ದು, ಶಾಸಕ ಹೆಚ್.ಟಿ.ಮಂಜು ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸುವರು ಎಂದು ರೇವಣ್ಣ ವಿವರಿಸಿದರು.‌

ಶ್ರೀಕಾಲಭೈರವೇಶ್ವರ ದೇವಾಲಯದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿರುವ ಕೇಂದ್ರದ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೂತನ ದೇವಾಲಯವನ್ನು ಉದ್ಘಾಟನೆ ಮಾಡಲಿದ್ದು, ವಿಶ್ರಾಂತ ನ್ಯಾಯಮೂರ್ತಿ ಲೋಕಾಯುಕ್ತ ಸಂತೋಷ್ ಹೆಗ್ಡೆ, ಸಂಸತ್ ಸದಸ್ಯರಾದ ಯಧುವೀರ್ ಕೃಷ್ಣದತ್ತ ಒಡೆಯರ್, ಡಾ.ಸಿ.ಎನ್. ಮಂಜುನಾಥ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಸಿಇಓ ಕೆ.ಆರ್. ನಂದಿನಿ, ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಾ.ನಾರಾಯಣ ಗೌಡ, ಮಾಜಿ ಶಾಸಕರಾದ ಕೆ. ಬಿ.ಚಂದ್ರಶೇಖರ್, ಕೆ.ಸುರೇಶ್ ಗೌಡ, ಬಿ.ಪ್ರಕಾಶ್, ತಹಸೀಲ್ದಾರ್ ಡಾ.ಅಶೋಕ್, ಸಮಾಜಸೇವಕರಾದ ಮಲ್ಲಿಕಾರ್ಜುನ್, ವಿಜಯ್ ರಾಮೇಗೌಡ, ಕಿಕ್ಕೇರಿ ಸುರೇಶ್, ಡಾಲುರವಿ, ಎಂ.ಬಿ.ಹರೀಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿನಗಳು ಭಾಗವಹಿಸಲಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು, ಸಾರ್ವಜನಿಕರು ಭಾಗವಹಿಸಿ ಶ್ರೀ ಕಾಲಭೈರವೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ರೇವಣ್ಣ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಪದ್ಮೇಶ್, ತಾಲ್ಲೂಕು ಶಿಕ್ಷಕರ ಪ್ರತಿಭಾ ಪರಿಷತ್ತಿನ ಅಧ್ಯಕ್ಷ ಉದೇಶ್‌ಗೌಡ, ಗ್ರಾಮದ ಮುಖಂಡರಾದ ಚಿಕ್ಕ ಬೋರೇಗೌಡ, ಕೆಂಪೇಗೌಡ, ಅಪ್ಪಾಜಿಗೌಡ, ಚಂದ್ರೇಗೌಡ, ಸಣ್ಣ ಸ್ವಾಮೀಗೌಡ, ಶಿವಲಿಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.

– ಶ್ರೀನಿವಾಸ್‌ ಆರ್.

Leave a Reply

Your email address will not be published. Required fields are marked *