ಕೆ.ಆರ್.ಪೇಟೆ – ಪಟ್ಟಣದ ಶ್ರವಣಬೆಳಗೊಳ ರಸ್ತೆಯಲ್ಲಿರುವ ಜಾಮಿಯಾ ಮಸೀದಿಯಿಂದ ಧರ್ಮಗುರುಗಳಾದ ನೂರುದ್ದಿನ್ ಷರೀಫ್ ಅವರ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಮೂಹಿಕ ಮೆರವಣಿಗೆ ನಡೆಸಿ ಜಯನಗರ ಬಡಾವಣೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿ ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ನಡೆಸಿದರು.

ಶಾಸಕ ಹೆಚ್.ಟಿ.ಮಂಜು, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಸಮಾಜ ಸೇವಕರಾದ ಆರ್.ಟಿ.ಓ. ಮಲ್ಲಿಕಾರ್ಜುನ್, ಮಿತ್ರ ಫೌಂಡೇಶನ್ ಅಧ್ಯಕ್ಷ ಕಾಂಗ್ರೆಸ್ ಮುಖಂಡ ವಿಜಯ್ ರಾಮೇಗೌಡ, ಮನ್ ಮುಲ್ ನಿರ್ದೇಶಕರಾದ ಡಾಲು ರವಿ, ಎಂ.ಬಿ.ಹರೀಶ್,
ಪುರಸಭೆ ಮಾಜಿ ಅಧ್ಯಕ್ಷ ಕೆ. ಗೌಸ್ ಖಾನ್, ಸದಸ್ಯರಾದ ಡಿ. ಪ್ರೇಮಕುಮಾರ್, ಕೆ.ಬಿ. ಮಹೇಶ್ ಕುಮಾರ್, ಮಾಜಿಸದಸ್ಯರಾದ ನವೀದ್ ಅಹಮದ್, ಹಾಫಿಜುಲ್ಲಾ ಷರೀಫ್, ಇಲಿಯಾಜ್ ಅಹಮದ್, ಇಲ್ಯಾಸ್ ಪಾಷಾ, ಸೌದಿಫಯಾಜ್, ಆಫೀಜ್ ಅಹಮದ್, ಅಪ್ಸರ್ ಪಾಷ ಸೇರಿದಂತೆ ಸಾವಿರಾರು ಮುಸ್ಲಿಂ ಬಾಂದವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
- ಶ್ರೀನಿವಾಸ್ ಆರ್.