ಕೆ.ಆರ್.ಪೇಟೆ- ಬೂಕನಕೆರೆಯಲ್ಲಿ ರಾಮಮಂದಿರ ಲೋಕಾರ್ಪಣೆ-ಡಾ.ನಿಶ್ಚಲಾನಂದನಾಥಸ್ವಾಮೀಜಿ ಸೇರಿದಂತೆ ಗಣ್ಯರು ಬಾಗಿ

ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಗ್ರಾಮಸ್ಥರು ಭಕ್ತಿಯ ಭಾವಭರಿತ ವಾತಾವರಣದಲ್ಲಿ ನೂತನ ರಾಮಮಂದಿರದ ಲೋಕಾರ್ಪಣಾ ಕಾರ್ಯಕ್ರಮವು ಸಡಗರ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಕೆಂಗೇರಿ ವಿಶ್ವ. ಒಕ್ಕಲಿಗರ ಸಂಸ್ಥಾನ ಮಠದ ಪೀಠಾಧಿಪತಿ ಡಾ.ನಿಶ್ಚಲಾನಂದನಾಥಸ್ವಾಮೀಜಿ ಆಶೀರ್ವಚನ ನೀಡುತ್ತಾ ಗುಡಿ ಗೋಪುರಗಳು ನಮ್ಮ ಸಂಸ್ಕೃತಿ ಪರಂಪರೆಯ ಪ್ರತಿಬಿಂಬಗಳಾಗಿವೆ. ಮುಂದಿನ ತಲೆ ಮಾರಿಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಬೇಕಾದರೆ ಗುಡಿ ಗೋಪುರಗಳ ಸಂರಕ್ಷಣೆ, ಜೀರ್ಣೋದ್ಧಾರ ಹಾಗೂ ನೂತನವಾಗಿ ನಿರ್ಮಿಸುವುದು ಅಗತ್ಯವಾಗಿದೆ ಎಂದು ಹೇಳಿದರು.


ಮನುಷ್ಯನಿಗೆ ಬೇಕಾದ ಶಾಂತಿನೆಮ್ಮದಿಯು ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ಕೇವಲ ಧರ್ಮದ ಕಾರ್ಯ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವುದರಿಂದ ಶಾಂತಿ ನೆಮ್ಮದಿಯನ್ನು ಪಡೆಯಬಹುದು. ಧರ್ಮ, ಶ್ರದ್ಧೆ, ಸಾಂಸ್ಕೃತಿಕ ಮೌಲ್ಯಗಳು ಹಾಗೂ ಯುವ ಪೀಳಿಗೆಗೆ ಭಕ್ತಿಯ ಮಹತ್ವದ ಬಗ್ಗೆ ವಿವರಿಸಿದರು. “ದೇವಾಲಯ ಮಾತ್ರ ಕಟ್ಟಡವಲ್ಲ; ಅದು ಸಮುದಾಯದ ಆಧ್ಯಾತ್ಮಿಕ ತಾಣವಾಗಿರಬೇಕು” ಎಂಬ ಸಂದೇಶವನ್ನು ಅವರು ನೀಡಿದರು.

ಶ್ರೀ ರಾಮಮಂದಿರ ಲೋಕಾರ್ಪಣೆಯ ಉದ್ಘಾಟನೆಯನ್ನು ಕಾಂಗ್ರೆಸ್ ಮುಖಂಡರು, ಸಮಾಜ ಸೇವಕರು ಹಾಗೂ ಮಿತ್ರ ಫೌಂಡೇಶನ್‌ನ ಅಧ್ಯಕ್ಷರಾದ ವಿಜಯ್ ರಾಮೇಗೌಡರು ನೆರವೇರಿಸಿದರು. ಅವರು ದೇವಾಲಯ ನಿರ್ಮಾಣದಲ್ಲಿ ಹಚ್ಚಿದ ಆಸಕ್ತಿ ಹಾಗೂ ತೊಡಗಿಸಿಕೊಳ್ಳುವ ಮನೋಭಾವನೆಗೆ ಗ್ರಾಮಸ್ಥರಿಂದ ಅಭಿನಂದನೆ ವ್ಯಕ್ತವಾಯಿತು.

ಕಾರ್ಯಕ್ರಮದ ಸಾನಿಧ್ಯ ವಹಸಿದ್ದ ಬೇಬಿ ಮಠದ ಶ್ರೀ ಶಿವಬಸವ ಸ್ವಾಮೀಜಿ (ಬೀಬಿ ಬೆಟ್ಟ, ಗವೀಮಠದ ಶ್ರೀ ಸ್ವತಂತ್ರ ಶ್ರೀ ಚೆನ್ನವೀರ ಸ್ವಾಮೀಜಿ, ಸಮಾರಂಭದಲ್ಲಿ ಭಾಗವಹಿಸಿ ತಮ್ಮ ಆಶೀರ್ವಚನ ನೀಡಿದರು. ಮೂಲಕ ಭಕ್ತರನ್ನು ಪಾವನಗೊಳಿಸಿದರು.
ಕಾರ್ಯಕ್ರಮದಲ್ಲಿ ನೂರಾರು ಭಕ್ತರು, ಗ್ರಾಮಸ್ಥರು, ಆಚಾರ್ಯರು, ಮಹಿಳೆಯರು ಹಾಗೂ ಮಕ್ಕಳ ಉಪಸ್ಥಿತಿ ಕಂಡುಬAದಿತು. ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ನಂತರ ವಿಶೇಷ ಪೂಜೆ, ಶ್ರೀರಾಮನ ಭಜನೆ-ಕೀರ್ತನೆಗಳು ಹಾಗೂ ಹಾರತಿ ನಡೆಯಿತು. ನಂತರ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜವರಾಯಿಗೌಡ ಮಾಜಿ ತಾ.ಪಂ.ಸದಸ್ಯರಾದ ಮೀನಾಕ್ಷಿ ಪುಟ್ಟರಾಜುಣ ಹೆಳವೇಗೌಡ, ಕೃಷ್ಣೇಗೌಡ, ಬೂಕನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ಯಾಮ್ ಪ್ರಸಾದ್, ತಾಲ್ಲೂಕು ಕೆಡಿಪಿ ಸದಸ್ಯ ಮಲ್ಲಿಕಾರ್ಜುನ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಬೆಟ್ಟದಹೊಸೂರು ಪ್ರಕಾಶ್, ಬೂಕನಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾಗೇಶ್, ಯಜಮಾನರಾದ ಮೊಳ್ಳೇಗೌಡ, ಬಿ.ಎನ್.ಪುಟ್ಟರಾಜು ಸೇರಿದಂತೆ ಬೂಕನಕೆರೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಭಾಗವಹಿಸಿದ್ದರು.

  • ಶ್ರೀನಿವಾಸ್‌ ಆರ್.

Leave a Reply

Your email address will not be published. Required fields are marked *