ಕೆ.ಆರ್.ಪೇಟೆ,ಜೂ.02: ತಾಲ್ಲೂಕಿನ ಸಿಂಧುಘಟ್ಟ ಗ್ರಾಮ ಪಂಚಾಯತ್ ನೂತನ ಉಪಾಧ್ಯಕ್ಷರಾಗಿ ಕ್ಯಾತನಹಳ್ಳಿ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಂಚಾಯಿತಿಯ ಈ ಹಿಂದಿನ ಉಪಾಧ್ಯಕ್ಷರಾದ ನಂಜಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬೇರೆ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದೇ ಇರುವ ಕಾರಣ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಎಇಇ ಮಂಜುನಾಥ್ ಕಾರ್ಯನಿರ್ವಹಿಸಿದರು. ಸಹ ಚುನಾವಣಾಧಿಕಾರಿಗಳಾಗಿ ತಾ.ಪಂ. ವ್ಯವಸ್ಥಾಪಕ ಅನಿಲ್ ಬಾಬು, ಪಿಡಿಓ ಕೆ.ಜೆ.ವಾಣಿ ಕಾರ್ಯನಿರ್ವಹಿಸಿದರು.

ನೂತನ ಉಪಾಧ್ಯಕ್ಷರಾದ ಸೋಮಶೇಖರ್ ಅವರನ್ನು ಶಾಸಕ ಹೆಚ್.ಟಿ.ಮಂಜು, ಟಿಎಪಿಸಿಎಂಎಸ್ ನಿರ್ದೇಶಕ ಎಚ್.ಟಿ.ಲೋಕೇಶ್, ಗ್ರಾ.ಪಂ.ಅಧ್ಯಕ್ಷೆ ಲಾವಣ್ಯ ಕುಮಾರ್, ಸದಸ್ಯರಾದ ದಿವ್ಯಗಿರೀಶ್, ಸುಮಲತ ಚೆಲುವರಾಜು, ಆಶಾ ಸೋಮಶೇಖರ್, ಜ್ಯೋತಿ ನಾಗರಾಜು, ರೂಪಾ ಮಹಾದೇವ್, ನವೀನ್, ನಾಗೇಶ್, ನವೀನ್ಕುಮಾರ್, ಮುಖಂಡರಾದ ಎಸ್.ಐ.ಗಿರೀಶ್, ಚೆಲುವರಾಜು, ಅತ್ತಿಮರನಹಳ್ಳಿ ಮಹಾದೇವ್, ಡೇರಿ ಉಪಾಧ್ಯಕ್ಷ ಎಸ್.ಎಂ.ರವಿ, ಡೇರಿ ನಿರ್ದೇಶಕ ಮೋಹನ್, ಕಾರ್ಯದರ್ಶಿ ಮಾದಪ್ಪ ಮತ್ತಿತರರು ಉಪಸ್ಥಿತರಿದ್ದು ಅಭಿನಂದಿಸಿದರು.
ನೂತನ ಉಪಾಧ್ಯಕ್ಷ ಸೋಮಶೇಖರ್ ಮಾತನಾಡಿ ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ನೌಕರರ ಸಹಕಾರದಿಂದ ಗ್ರಾಮ ಪಂಚಾಯಿತಿಯ ಸಮಗ್ರ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
– ಶ್ರೀನಿವಾಸ್ ಆರ್.