ಕೊರಟಗೆರೆ :- ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೊದಲ ಬಾರಿ 527ಅಂಕ ಪಡೆದು ಪ್ರಥಮ ಸ್ಥಾನಗಳಿಸಿದ್ದ ವಿದ್ಯಾರ್ಥಿನಿ ಚಲಬಿಡದೆ ಮರು ಪರೀಕ್ಷೆ ಆಯ್ಕೆ ಮಾಡಿ ಅಧಿಕ ಅಂಕಗಳೊಂದಿಗೆ 534 ಗಳಿಸಿ ಇಡೀ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ತಾಲ್ಲೂಕಿನ ಕಸಬಾ ಹೋಬಳಿಯ ಬಜ್ಜನಹಳ್ಳಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಉತ್ತಮ ಅಂಕದೊಂದಿಗೆ ತೇರ್ಗಡೆ ಹೊಂದಿದ್ದಾರೆ.
ವಿದ್ಯಾರ್ಥಿನಿ ಲಾವಣ್ಯ .ಜಿ ಮೂಲತಃ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿ ಗ್ರಾಮದ ಗೋವಿಂದರಾಜು ಸಿ.ಆರ್ ಎಂಬುವರ ಮಗಳಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿನಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುವ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ ಪರಮೇಶ್ವರ್ ರವರು ಕೊರಟಗೆರೆ ತಾಲ್ಲೂಕಿನಲ್ಲಿ ವಸತಿ ಶಾಲೆಗಳ ಅಭಿವೃದ್ಧಿಗೆ ಸದಾ ಜೊತೆಯಲ್ಲಿದ್ದು, ಗ್ರಾಮೀಣ ಪ್ರದೇಶದ ರೈತರ,ಬಡಜನರ ಮಕ್ಕಳ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿದ್ದಾರೆ.
ತಾಲ್ಲೂಕಿನ ಸುಮಾರು 5-6ವಸತಿ ಶಾಲೆಗಳನ್ನು ತಂದು ಯಾರು ಶಿಕ್ಷಣದಿಂದ ವಂಚಿರಾಗಬಾರದು ಎಂಬಂತೆ ಅನೇಕ ಬಡ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ವಿದ್ಯಾರ್ಥಿಗಳ ಜೀವನಕ್ಕೆ ದಾರಿದೀಪವಾಗಿರುವುದು ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರು, ಉಪನ್ಯಾಸಕರು ಸೇರಿದಂತೆ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
– ಶ್ರೀನಿವಾಸ್, ಕೊರಟೆರೆ.