ಕೊರಟಗೆರೆ ;- ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದವರಿಗೆ ಯುವ ಕಾಂಗ್ರೆಸ್ ವತಿಯಿಂದ ಕೊರಟಗೆರೆ ಪಟ್ಟಣದ ಎಸ್.ಎಸ್.ಆರ್ ವೃತ್ತದಲ್ಲಿ ಭಾವಚಚಿತ್ರದ ಮುಂದೆ ಮೇಣದ ಬತ್ತಿ ಬೆಳಗಿ ಪುಪ್ಪನಮನ ಸಲ್ಲಿಸಿ ಶ್ರದ್ದಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಬೈರೇಶ್ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಖಂಡನೀಯವಾಗಿದ್ದು, ಕೇಂದ್ರ ಸರ್ಕಾರ ಇದಕ್ಕೆ ಕಾರಣರಾದ ನೀಚ ಉಗ್ರಗಾಮಿಗಳನ್ನು ಹುಡುಕಿ ಗುಂಡಿಕ್ಕಿ ಕೊಲ್ಲುವ ಮೂಲಕ ದೇಶದ ಶಕ್ತಿ ಏನೆಂಬುದನ್ನು ಪಾಪಿ ಪಾಕಿಸ್ತಾನಕ್ಕೆ ಮನದಟ್ಟು ಮಾಡಬೇಕು ಎಂದು ಅಗ್ರಹಿಸಿದ ಅವರು ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಪೂರ್ಣ ಅಧಿಕಾರ ನೀಡಿ ಇಂತಹ ದೇಶದೋಹಿಗಳು ಇಲ್ಲಿನ ಉಪ್ಪು ತಿಂದ ಮನೆಗೆ ದ್ರೋಹ ಬಗೆಯುವ ಪರಮ ನೀಚರನ್ನು ಮುಲಾಜಿಲ್ಲದೆ ಗುಂಡಿಟ್ಟುಕೊಲ್ಲಲು ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ಮುಖಂಡ ಟಿಪ್ಪು ಷರೀಫ್ ಮಾತನಾಡಿ ಕಾಶ್ಮೀರದ ಪೆಹಲ್ಲಾಮ್ ಪ್ರವಾಸಿ ತಾಣದಲ್ಲಿ ನಡೆದ ಭಯೋತ್ಪಾದಕರ ದಾಳಿ ಕೇಂದ್ರದ. ಬೇಹುಗಾರಿಕೆ ಮತ್ತು ಭದ್ರತಾ ವೈಫಲ್ಯಗಳೇ ಕಾರಣ ಇದನ್ನು ಖಂಡಿಸುತ್ತೇವೆ ಭಾರತೀಯರೆಲ್ಲಾ ಒಂದಾಗಿ ಇದಕ್ಕೆ ತಕ್ಕ ಉತ್ತರವನ್ನು ನಿಡಬೇಕಾಗಿದೆ, ಈ ಘಟನೆಗೆ ಧರ್ಮ, ಜಾತಿಯ ಬಣ ಕಟ್ಟುವುದು ಬೇಡ ಹತ್ಯೆಗೀಡಾದವರಲ್ಲೆ ಭಾರತೀಯರು ಎಂಬುದು ಮುಖ್ಯ ಕೇಂದ್ರ ಸರ್ಕಾರ ಈ ದುಸ್ಕೃತ್ಯಕ್ಕೆ ಕಾರಣರಾದವರನ್ನು ಮಟ್ಟ ಹಾಕಲು ಎಲ್ಲರೂ ಕೈ ಜೋಡಿಸಬೇಕಾಗಿದೆ ಎಂದು ಒತ್ತಾಯಿಸಿದರು.

ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಪ.ಪಂ.ನಾಮಿನಿ ಸದಸ್ಯ ಪೈಯಾಜ್ ಅಹಮದ್, ಮುಖಂಡರುಗಳಾದ ಕಾರ್ ಮಹೇಶ್, ಭರತ್, ದೀಪಕ್, ರಾಕೇಶ್, ಕಿರಣ್ಕುಮಾರ್, ಮಂಜುನಾಥ್ ಶ್ರೇಯಸ್ ಸೇರಿದಂತೆ ಇನ್ನಿತರ ಯುವ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.
– ಶ್ರೀನಿವಾಸ್