ಮೈಸೂರು-ಸಾಹಸಸಿಂಹ ವಿಷ್ಣುವರ್ಧನ್ 15 ನೇ ಪುಣ್ಯಸ್ಮರಣೆ-ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಭಾರತಿ ವಿಷ್ಣುವರ್ಧನ್

ಮೈಸೂರು:ಉದ್ಬೂರ್ ಗೇಟ್ ಬಳಿ ಇರುವ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕದಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿಷ್ಣುವರ್ಧನ್ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಮಾಲಾರ್ಪಣೆ ಮಾಡಿ,ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ ಬಳಗದ ವಿಷ್ಣುವರ್ಧನ್ ರವರ ಕೋಟಿಗೊಬ್ಬ 2025 ರ ಕ್ಯಾಲೆಂಡರ್ ಅನ್ನು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ ರವರು ಬಿಡುಗಡೆಗೊಳಿಸಿದರು.

ಈ ಸಮಯದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಭಿರವನ್ನು ಆಯೋಜಿಸಲಾಗಿತ್ತು.60ಕ್ಕೂ ಹೆಚ್ಚು ಜನ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.

ಇದೇ ಸಂದರ್ಭದಲ್ಲಿ ವಿಷ್ಣು ಅಭಿಮಾನಿಗಳ ಸಂಘದ ಒಕ್ಕೂಟದ ಅಧ್ಯಕ್ಷ ಎಂ ಡಿ ಪಾರ್ಥಸಾರಥಿ, ಆಲ್ವಿನ್,ಸಮಾಜ ಸೇವಕರಾದ ವಿಕ್ರಂ ಅಯ್ಯಂಗಾರ್,ಎಂ.ಎನ್ ಚೇತನ್ ಗೌಡ,ಲಕ್ಷ್ಮಣ, ಮಹದೇವ್,ಜೀವದಾರ ರಕ್ತ ನಿಧಿ ಕೇಂದ್ರದ ಸಿಬ್ಬಂದಿಗಳಾದ ಸುರೇಶ್,ಪ್ರಭು,ಸಂತೋಷ್ ,ಸಿದ್ದಪ್ಪ, ಬಸವರಾಜು,ಹಾಗೂ ಇನ್ನಿತರರು ಹಾಜರಿದ್ದರು.

——-ಮಧುಕುಮಾರ್

Leave a Reply

Your email address will not be published. Required fields are marked *

× How can I help you?