ಚಿಕ್ಕಮಗಳೂರು, ಜೂನ್ 13:- ಚಿಕ್ಕಮಗಳೂರು ತಾಲ್ಲೂಕು ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳ ನದಲ್ಲಿ ಸಾಹಿತ್ಯ ಸಿರಿ ಪ್ರಶಸ್ತಿಗೆ ಡಾ|| ಮಂಜುಳಾ ಹುಲ್ಲಳ್ಳಿ, ಸತ್ಯವತಿ ಹಾಗೂ ಪ್ರತಿಭಾ ನಂದಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಈ ಸಮ್ಮೇಳನದಲ್ಲಿ ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಚಿಕ್ಕಮಗಳೂರು ತಾಲ್ಲೂಕಿನ ಲೇಖಕಿ ಹಾಗೂ ಸಾಹಿತಿ ಸಂಶೋಧಕಿ ಡಾ. ಮಂಜುಳಾ ಹುಲ್ಲಳ್ಳಿ, ವಿಶ್ರಾಂತ ಗ್ರಂಥಪಾಲಕಿ ಸತ್ಯವತಿ ಹಾಗೂ ಕಲಾಪ್ರತಿಭೆ ಪ್ರತಿಭಾ ನಂದಕುಮಾರ್ ಅವರನ್ನು ಆಯ್ಕೆಗೊಳಿಸಿ ಸಮ್ಮೇಳನದಲ್ಲಿ ಪುರಸ್ಕರಿಸಲಾಗುವುದು ಎಂದು ಕಸಾಪ ಜಿಲ್ಲಾ ಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.
- ಸುರೇಶ್ ಎನ್.