ತುಮಕೂರು : ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ|| ಬಿ.ಆರ್.ಅಂಬೇಡ್ಕರ್ ಅವರ ಧರ್ಮಪತ್ನಿಯಾದ ಲೇಟ್ ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಹಮ್ಮಿಕೊಳ್ಳಲಾಗಿತ್ತು.
ರಮಾಬಾಯಿರವರ ಪರಿನಿಬ್ಬಾಣ ದಿವಸ್ ಕುರಿತು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ರವರು ಮಾತನಾಡುತ್ತಾ ರಮಾಬಾಯಿರವರು ವಿಧಿವಶರಾದ ಐದು ವರ್ಷಗಳ ತರುವಾಯ ಡಾ. ಬಿ.ಆರ್.ಅಂಬೇಡ್ಕರರು ‘ದಿ ಪಾರ್ಟಿಷನ್ ಆಫ್ ಇಂಡಿಯಾ’ ಎಂಬ ವಿದ್ವತ್ ಪೂರ್ಣ ಗ್ರಂಥವನ್ನು ಬರೆದು ಅದನ್ನು ಅವರ ಪತ್ನಿ ರಮಾಬಾಯಿ ಅವರಿಗೆ ಸಮರ್ಪಿಸಿದರು, ಈ ಕೃತಿಯು 19ನೇ ಶತಮಾನದಲ್ಲಿ ಪತ್ನಿಯೊಬ್ಬರಿಗೆ ಸಮರ್ಪಣೆ ಮಾಡಿದ ಮೊಟ್ಟ ಮೊದಲ ಕೃತಿ ಎನ್ನಲಾಗಿದೆ.

ಅಂಬೇಡ್ಕರ್ರವರಿಂದ ರಚಿತವಾದ ಆ ಕೃತಿಯನ್ನು ರಮಾಬಾಯಿ ಅವರಿಗೆ ಸಮರ್ಪಿಸುವ ಸಲುವಾಗಿ ನಾಲ್ಕು ಸಾಲುಗಳನ್ನು ಬರೆಯುತ್ತಾ ‘ಆಕೆಯ ಹೃದಯ ಸೌಜನ್ಯತೆ ಹಾಗೂ ಪರಿಶುದ್ಧ ಶೀಲ ಮತ್ತು ನಮಗೆ ಯಾವುದೇ ಹಿತಚಿಂತಕರು ಇಲ್ಲದಿದ್ದ ಆ ದಿನಗಳಲ್ಲಿ ನಮ್ಮ ಪಾಲಿಗೆ ಬಂದಿದ್ದ ಬಡತನ ಮತ್ತು ಸಂಕಷ್ಟಗಳಲ್ಲಿ ಕಾಂತಚಿತ್ತದಿಂದ ಮನಪೂರ್ವಕವಾಗಿ ನನ್ನನ್ನು ಸಂತೈಸುತ್ತ ಸಹಕರಿಸಿದ ರಮಾಗೆ’ ಈ ಕೃತಿ ಸಮರ್ಪಿತ ಎಂದು ಭಾವುಕರಾಗಿ ಬರೆದಿದ್ದಾರೆ.

ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಡಾ|| ಎಪಿಜೆ ಅಬ್ದುಲ್ ಕಲಾಂ ಫೌಂಡೇಷನ್ & ಅಕಾಡಮಿಯ ಮುಖ್ಯಸ್ಥರಾದ ನಿಸಾರ್ ಅಹಮ್ಮದ್ರವರು ಕಾರ್ಯಕ್ರಮದ ಕುರಿತು ಮಾತನಾಡುತ್ತಾ ರಮಾಭಾಯಿ ಅಂಬೇಡ್ಕರ್ರವರು ತಮ್ಮ ಪತಿಯಾದ ಅಂಬೇಡ್ಕರ್ರವರ ಅನುಪಸ್ಥಿತಿಯಲ್ಲಿ ತನ್ನ ಆಭರಣಗಳನ್ನು ಮಾರಿ ತಮ್ಮ ಮಕ್ಕಳ ಶವಸಂಸ್ಕಾರವನ್ನು ಮಾಡಿದ ಸ್ಥಿತಿ ಯಾವೊಬ್ಬ ಭಾರತೀಯ ಪುರಷನ ಹೆಂಡತಿಗೂ ಬಂದಿರಲಾರದು. ಅಂಬೇಡ್ಕರ್ರವರ ಪ್ರತಿಯೊಂದು ಕಾರ್ಯದಲ್ಲೂ ನೆರಳಾಗಿ ನಿಂತು ಅವರಿಗೆ ಪ್ರೇರಪಣೆಯಾಗಿದ್ದರು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆಸ್ತೂರು ನರಸಿಂಹಮೂರ್ತಿ, ಲಕ್ಷ್ಮೀನಾರಾಯಣ್. ಎಸ್., ಕಿರಣ್ ವೈ.ಎಸ್., ಮನು ಟಿ.ಎಲ್., ಜೆಬಿನೇಶನ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷರಾದ ಇಲ್ಲಾಸ್ ಅಹ್ಮದ್, ಮೋಹಿನ್ ಅಹ್ಮದ್, ನಿಸಾರ್ ಅಹ್ಮದ್, ರವಿಕುಮಾರ್, ಪ್ರಸನ್ನ ಗೂಳೂರು, ಅಬ್ದುಲ್ ರೆಹಮಾನ್, ಇಲಿಯಾಜ್ ಅಹಮದ್, ಮುಗದಮ್ ಶರೀಫ್, ನೂರುಲ್ಲಾ ಸಾಬ್, ಗುಲ್ಜಾರ್ ಅಹಮದ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
- ಕೆ.ಬಿ.ಚಂದ್ರಚೂಡ