ತುಮಕೂರು : ನಮ್ಮ ಸಿದ್ಧಗಂಗಾ ಸಂಸ್ಥೆಯಲ್ಲಿ ವಿದ್ಯೆ ಮಾತ್ರವಲ್ಲ ಸಂಸ್ಕಾರಕ್ಕೂ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತದೆ ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳು ಡಿಜಿಟಲ್ ಮಾಹಿತಿಗೆ ಅವಲಂಬನೆಯಾಗಿದ್ದಾರೆ ಸಾಧನೆ ಮಾಡಬೇಕಾದರೆ ನಿರಂತರ ಶ್ರಮ, ಪ್ರಾಮಾಣಿಕತೆ, ಕುತೂಹಲ, ಆಸಕ್ತಿಯನ್ನು, ಹೊಂದಿರಬೇಕೆಂದು ಬೆಂಗಳೂರು ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶ್ರೀಮತಿ ನಿಶಾರಾಣಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಶ್ರೀ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ತುಮಕೂರು ಕ್ರೀಡೆ, ಸಾಂಸ್ಕೃತಿಕ, ಎನ್.ಎಸ್.ಎಸ್, ಎನ್.ಸಿ.ಸಿ ,ರೆಡ್ ಕ್ರಾಸ್, ಚಟುವಟಿಕೆಗಳ ಸಮಾರೋಪ ಸಮಾರಂಭದ ಅಭಿವ್ಯಕ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಗುರು ಹಿರಿಯರಿಗೆ ಗೌರವ ನೀಡಬೇಕು ಉಪನ್ಯಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿ ಶೈಕ್ಷಣಿಕ ವಿಚಾರಗಳ ಬಗ್ಗೆ ಚರ್ಚಿಸಿ ವಿಷಯದ ಜ್ಞಾನವನ್ನು ಪಡೆಯಬೇಕು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೀಳರಿಮೆಯನ್ನು ಹೋಗಲಾಡಿಸಿಕೊಂಡು ಆಧುನಿಕ ಜಗತ್ತಿನೊಂದಿಗೆ ಬದುಕಲು ಉನ್ನತ ಶಿಕ್ಷಣದ ಅವಶ್ಯಕತೆ ಮುಖ್ಯವಾಗಿದೆ ಎಂದು ತಿಳಿಸಿದರು.

ಟಿ.ಕೆ.ನಂಜುಂಡಪ್ಪನವರು ಮಾತನಾಡುತ್ತಾ ಸಮಾಜ ಮತ್ತು ವ್ಯಕ್ತಿ ಶಿಕ್ಷಣದೊಂದಿಗೆ ನಿರಂತರವಾಗಿ ಸಂಬAಧ ಬೆಳೆಸಿದಾಗ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಉಪನ್ಯಾಸಕರು ವಿದ್ಯಾರ್ಥಿಗಳ ಮಾನಸಿಕ ಮಟ್ಟವನ್ನು ಅರ್ಥ ಮಾಡಿಕೊಂಡು ಬೋಧನೆ ಮಾಡಬೇಕು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಆಸಕ್ತಿ ಕಡಿಮೆಯಾಗುತ್ತಿದ್ದು ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಲು ವಿಫಲರಾಗುತ್ತಿದ್ದಾರೆ ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ತಮ್ಮ ಜವಾಬ್ದಾರಿಗಳನ್ನು ಅರಿತು ಮಾದರಿ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಬಿ. ನಿಜಲಿಂಗಪ್ಪನವರು ಮಾತನಾಡುತ್ತಾ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ ನ್ಯಾಕ್ ನಿಂದ “ಎ” ಗ್ರೇಡ್ ಪಡೆದ ಏಕೈಕ ಕಾಲೇಜು ನಮ್ಮದು. ನಮ್ಮ ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಿ ರ್ಯಾಂಕ್ಗಳನ್ನು ತರುವ ಮೂಲ 2023-24ನ ಶೈಕ್ಷಣಿಕ ವರ್ಷವನ್ನು ಸುವರ್ಣಾಕ್ಷರದಲ್ಲಿ ಬರೆದಿಡುವಂತೆ ಮಾಡಿದ್ದಾರೆ ಕಾಲೇಜು ಸದಾ ವಿದ್ಯಾರ್ಥಿಗಳ ಏಳಿಗೆಗೆ ನಿರಂತರವಾಗಿ ಶ್ರಮಿಸುತ್ತಿದೆ ವಿದ್ಯಾರ್ಥಿಗಳು ಮುಂದಿನ ಜೀವನಕ್ಕೆ ಬೇಕಾದ ಮೌಲ್ಯಗಳನ್ನು ಬಿತ್ತುವ ಕೆಲಸವನ್ನು ನಮ್ಮ ಕಾಲೇಜು ಮಾಡುತ್ತಿದೆ ಎಂದು ತಿಳಿಸಿದರು.

ಈ ವೇಳೆ ಡಾ.ಬಿ.ಆರ್.ಚಂದ್ರಶೇಖರಯ್ಯ, ಶ್ರೀಮತಿ ಬಸವಶ್ರುತಿ, ಐ.ಕ್ಯುಎ.ಸಿ ಸಂಯೋಜಕರಾದ ಎಚ್.ಜಿ. ಸರ್ವಮಂಗಳ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.