ತುಮಕೂರು- ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯ- ಪ್ರಭಾಕರ್ ರಾಮ್ ನಾಯಕ್

ತುಮಕೂರು: ತಾಲೂಕಿನ ಊರ್ಡಿಗೆರೆ ವಲಯದ ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಮತ್ತು ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ)ನ ತುಮಕೂರು ತಾಲ್ಲೋಕು ಯೋಜನಾಧಿಕಾರಿಗಳಾದ ಪ್ರಭಾಕರ್ ರಾಮ್ ನಾಯಕ್ ಮತ್ತು ಶಾಲೆಯ ಮುಖ್ಯೋಪಾಧ್ಯರಾದ ಶೈಲಜಾ ರವರು ಗಿಡಕ್ಕೆ ನೀರೆರೆಯುವ ಮೂಲಕ ವಿಶ್ವ ಪರಿಸರ ದಿನವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಯೋಜನಾಧಿಕಾರಿಗಳಾದ ಪ್ರಭಾಕರ್ ರಾಮ್ ನಾಯಕ್ ರವರು, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯ,ಪರಿಸರ ಪ್ರಜ್ಞೆ ಮತ್ತು ಕಾಳಜಿಯ ಕುರಿತು ಮಾಹಿತಿ ನೀಡಿದರು.

ಶಾಲೆಯ ಶಿಕ್ಷಕರರಾದ ನಾಗರತ್ನಮ್ಮ ರವರು ಪರಿಸರ ಮಾಲಿನ್ಯದಿಂದ ಆಗುವ ಪರಿಣಾಮಗಳ ಬಗ್ಗೆ ಹಾಗೂ ಪರಿಸರ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ಸವಿತಾ, ಭಾಗ್ಯ, ವಲಯ ಮೇಲ್ವಿಚಾರಕರಾದ ಹೆಚ್.ಎಸ್.ಲೋಕೇಶ್,ಕೃಷಿ ಮೇಲ್ವಿಚಾರಕರಾದ ಅನುಕುಮಾರ್, ಸೇವಾ ಪ್ರತಿನಿಧಿ ಕಲಾವತಿ ಹಾಗೂ ಸ್ವಸಹಾಯ ಸಂಘದ ಸದಸ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

– ಕೆ.ಬಿ.ಚಂದ್ರಚೂಡ

Leave a Reply

Your email address will not be published. Required fields are marked *