ತುಮಕೂರು-ಭಾರತವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದವರು ದಿ.ರಾಜೀವ್ ಗಾಂಧಿ-ಇಕ್ಬಾಲ್ ಅಹಮದ್

ತುಮಕೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ.ರಾಜೀವ್‌ಗಾಂಧಿಯವರ 35ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಕಾಂಗ್ರೆಸ್ ಕಚೇರಿಯಲ್ಲಿ ಇರಿಸಿದ್ದ ಮಾಜಿ ಪ್ರಧಾನಿ ದಿ.ರಾಜೀವ್‌ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಾಜಿ ಪ್ರಧಾನಿಗಳ ಜೀವನ ಮತ್ತು ಸಾಧನೆಯನ್ನು ನೆನಪು ಮಾಡಿಕೊಳ್ಳುವ ಮೂಲಕ ಮಾನವ ಬಾಂಬ್‌ಗೆ ತುತ್ತಾದ ಪಕ್ಷದ ನಾಯಕರಿಗೆ ಮುಖಂಡರುಗಳು ಶ್ರದ್ದಾಂಜಲಿ ಸಲ್ಲಿಸಿದರು.

ಮತ್ತೊರ್ವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಮಾತನಾಡಿ,ಕಿರಿಯ ವಯಸ್ಸಿನಲ್ಲಿಯೇ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿ, ದೇಶವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗುವ ಮೂಲಕ ಆ ಹುದ್ದೆಗೆ ಘನತೆಯನ್ನು ತಂದು ಕೊಟ್ಟುವರು ರಾಜೀವ್‌ಗಾಂಧಿ,ಭಾರತವಲ್ಲದೆ, ಭಾರತದ ಸುತ್ತಮುತ್ತಲಿನ ರಾಷ್ಟ್ರಗಳಲ್ಲಿಯೂ ಶಾಂತಿ ನೆಲಸಬೇಕು ಎಂಬ ಕನಸು ಕಂಡಿದ್ದ ರಾಜೀವ್‌ಗಾಂಧಿ ಶ್ರೀಲಂಕಾ ದೇಶದಲ್ಲಿ ಎಲ್‌ಟಿಟಿಇ ಉಪಟಳಕ್ಕೆ ಕಡಿವಾಣ ಹಾಕಲು ಶಾಂತಿಪಾಲನಾ ಪಡೆ ಕಳುಹಿಸಿದ್ದ ವಿಚಾರವಾಗಿ ದ್ವೇಷವಾಗಿ ಪರಿಗಣಿಸಿದ ಎಲ್.ಟಿ.ಟಿ.ಇಯವರು ಚುನಾವಣಾ ಪ್ರಚಾರಕ್ಕೆ ತೆರಳಿದ ಅವರನ್ನು ಮಾನವ ಬಾಂಬ್ ಮೂಲಕ ಕೊಲೆ ಮಾಡಿದರು.ಭಯೋತ್ಪಾಧಕರಿಗೆ ಜಾತಿ, ಮತ, ಧರ್ಮದ ಇಲ್ಲ. ಭಯೋತ್ಪಾಧಕರು ಎಲ್ಲಿಯೇ ಇದ್ದರೂ ಅವರನ್ನು ಕಾನೂನಿಗೆ ಒಪ್ಪಿಸುವ ಮೂಲಕ ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ,ಒಂದು ದೇಶದ ಪ್ರಧಾನಿಯ ಮಗನಾಗಿ ಪೈಲೆಟ್ ಆಗುವ ಮೂಲಕ ದೇಶ ಸೇವೆಗೆ ಮುಂದಾಗಿದ್ದ ರಾಜೀವ್‌ಗಾಂಧಿ,ಇಂದಿರಾಗಾಂಧಿಯ ಹತ್ಯೆಯಿಂದಾಗಿ ಅನಿವಾರ್ಯವಾಗಿ ಪ್ರಧಾನಿ ಪಟ್ಟ ವಹಿಸಿಕೊಂಡರು.ದೇಶ ಹಿಂದೆ ಉಳಿಯಲು ಕಾರಣವೆನೆಂದು ತಿಳಿಯಲು ಹಲವಾರು ದೇಶಗಳಲ್ಲಿ ಪ್ರವಾಸ ಮಾಡಿ, ಅಧ್ಯಯನ ನಡೆಸಿ, ವಿಜ್ಞಾನ, ತಂತ್ರಜ್ಞಾನವನ್ನು ಅಳವಡಿಸಿಕೊಂಡು ಭಾರತಕ್ಕೆ ಭದ್ರ ಬುನಾದಿ ಹಾಕಿದರು.ಅದರ ಫಲವಾಗಿ ಇಂದು ಭಾರತ ವಿಶ್ವದ ಮುಂದುವರೆದ ರಾಷ್ಟçಗಳ ಪಟ್ಟಿಯಲ್ಲಿದೆ.ನಿಮ್ಮ ಜೀವಕ್ಕೆ ಅಪಾಯವಿದೆ ಎಂದು ಹೇಳಿದರೂ ಲೆಕ್ಕಿಸದೆ ಜನರೊಂದಿಗೆ ಜನರ ಕಲ್ಯಾಣಕ್ಕಾಗಿ ದುಡಿದ ಮಹನೀಯರು ರಾಜೀವ್‌ಗಾಂಧಿ, ಆದರೆ ಇಂದಿನ ಪ್ರಧಾನಿ ಕಳದೆ ಎರಡು ವರ್ಷಗಳಿಂದ ನಮ್ಮದೇ ದೇಶದ ಮಣಿಪುರ ಹೊತ್ತಿ ಉರಿದರು ಅತ್ತತಿರುಗಿಯೂ ನೋಡಿಲ್ಲ.ಇದು ಓರ್ವ ಪ್ರಧಾನಿಯ ಅಡಳಿತ ವೈಖರಿಯೇ ಎಂದು ನಾವೆಲ್ಲರೂ ಪ್ರಶ್ನಿಸಬೇಕಿದೆ ಎಂದರು.

ತುಮಕೂರು ಗ್ರಾಮಾಂತರ ಶಾಸಕರಾದ ಸುರೇಶಗೌಡ ಅವರು ಬೆಳಗ್ಗೆ ಸರಕಾರ ಮತ್ತು ಜಿಲ್ಲಾ ಮಂತ್ರಿಯನ್ನು ಟೀಕಿಸುವುದು, ಸರಕಾರದ ನೀಡಿದ ಹಣದಲ್ಲಿಯೇ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ ನಡೆಸುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಇವರಿಗೆ ನೈತಿಕತೆ ಇದೆಯೇ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಪ್ರಶ್ನಿಸಿದರು.

ಕೆಪಿಸಿಸಿ ಉಪಾಧ್ಯಕ್ಷರಾದ ಮುರುಳೀಧರ ಹಾಲಪ್ಪ, ಬ್ಲಾಕ್‌ಕಾಂಗ್ರೆಸ್‌ಅಧ್ಯಕ್ಷರಾದ ಮೆಸ್ ಮಹೇಶ್, ಜಿಲ್ಲಾ ವಕ್ತಾರರಾದ ಕೆ.ಎಂ.ಸುಜಾತ, ಮಾಧ್ಯಮ ಸಂಯೋಜಕರಾದ ತೋವಿನಕೆರೆ ಪುಟ್ಟರಾಜುಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *