ತುಮಕೂರು-ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ

ತುಮಕೂರು: ಲೋಕಸಭಾ ಕ್ಷೇತ್ರದ ಕೆರೆಗೋಡಿ ರಂಗಾಪುರ ಮಠದ ಶ್ರೀ ಗುರು ಪರದೇಶಿಕೇಂದ್ರ ಸ್ವಾಮಿ ಸಮುದಾಯ ಭವನದಲ್ಲಿ ಜರುಗಿದ “ವಿಕಸಿತ ಕೃಷಿ ಸಂಕಲ್ಪ ಅಭಿಯಾನ” ಕಾರ್ಯಕ್ರಮಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ಶ್ರೀ ವಿ.ಸೋಮಣ್ಣನವರು ಚಾಲನೆ ನೀಡಿದರು.

ನೂತನ ತಂತ್ರಜ್ಞಾನ ಮತ್ತು ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರ್ಕಾರವು ಇದೇ ಮೇ 29 ರಿಂದ ಜೂನ್ 12ರ ವರೆಗೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದೆ. 700 ಜಿಲ್ಲೆಗಳಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚಿನ ತಂಡಗಳು ಭಾಗವಹಿಸಲಿವೆ. ಈ ಅಭಿಯಾನದಲ್ಲಿ ರೈತರ ಆವಿಷ್ಕಾರ ಹಾಗೂ ಪ್ರತಿಕ್ರಿಯೆಯನ್ನು ದಾಖಲೀಕರಣ ಮಾಡಲಾಗುತ್ತಿದೆ ಎಂದು ಸೋಮಣ್ಣನವರು ತಿಳಿಸಿದರು.

ಈ ಸಮಾರಂಭದಲ್ಲಿ, ಜನಪ್ರತಿನಿಧಿಗಳು, ದಿಶಾ ಸಮಿತಿ ಸದಸ್ಯರು, ರೈತ ಮುಖಂಡರು, ಕೃಷಿ ತಂತ್ರಜ್ಞರು ಹಾಗೂ ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.

– ಕೆ.ಬಿ.ಚಂದ್ರಚೂಡ

Leave a Reply

Your email address will not be published. Required fields are marked *