ಕೊರಟಗೆರೆ :- ತಾಲೂಕಿನ ಕಸಬಾ ಹೋಬಳಿ ವಡ್ಡಗೆರೆ ಗ್ರಾಮ ಪಂಚಾಯಿತಿಯಲ್ಲಿ ಇತ್ತೀಚೆಗೆ ಮಹಿಳಾ ಗ್ರಾಮ ಸಭೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ರಕ್ಷಿತಾ ಎಂ ಬಿ ವೀರ ಖ್ಯಾತಯ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಾನ್ಯ ಸರ್ಕಾರದ ಆದೇಶದಂತೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರ ಪ್ರಭು ಮಾರ್ಗದರ್ಶನದಲ್ಲಿ ಹಾಗೂ ಕೊರಟಗೆರೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಅನಂತರಾಮು ಆದೇಶದಂತೆ ಮಹಿಳಾ ಗ್ರಾಮ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಗ್ರಾಮ ಪಂಚಾಯತಿಯ ನೋಡಲ್ ಅಧಿಕಾರಿಗಳಾದ ಶ್ರೀ ಅನಂತರಾಜು ವಿಸ್ತರಣಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊರಟಗೆರೆ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಸಭೆಯನ್ನ ಯಶಸ್ವಿಗೊಳಿಸಿದರು.

ನೋಡಲ್ ಅಧಿಕಾರಿ ಅನಂತರಾಮ ಮಾತನಾಡಿ ಗ್ರಾಮ ಪಂಚಾಯಿತಿಗಳಲ್ಲಿ ನೈರ್ಮಲ್ಯ ಕಾಪಾಡಬೇಕು, ಸಾಂಕ್ರಾಮಿಕ ರೋಗ ಹರಡುವುದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು, ಚರಂಡಿ ಶುದ್ಧಗೊಳಿಸಿ ಸೊಳ್ಳೆ ಸೇರಿದಂತೆ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು, ಶುದ್ಧ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಮೂಲಭೂತ ಸೌಕರ್ಯದ ಜೊತೆಗೆ ಆರೋಗ್ಯಕರ ವಾತಾವರಣ ಕಲ್ಪಿಸುವಲ್ಲಿ ಗ್ರಾಮ ಪಂಚಾಯಿತಿ ಪ್ರಮುಖ ಪಾತ್ರ ವಹಿಸಬೇಕು ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ಮಮ್ತಾಜ್ ಬೇಗಂ ರವರು ಮಾತನಾಡಿ ನಾವು ಹೆಣ್ಣು ಮಕ್ಕಳು ಕಾನೂನು ರೀತಿ ಸೌಲಭ್ಯಗಳನ್ನು ಪಡೆದುಕೊಂಡು ಯಾರಿಗೂ ಹೆದರದೆ ಕೆಲಸವನ್ನು ನಿರ್ವಹಿಸಬೇಕು ಸರ್ಕಾರದ ಸೌಲತ್ತುಗಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಗ್ರಾಮದ ಪ್ರತಿ ಮನೆಮನೆಗೂ ಮುಟ್ಟಿಸುವ ಕಾರ್ಯವನ್ನು ಮತ್ತು ಮಾಹಿತಿ ಶಿಕ್ಷಣ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಕರೆ ನೀಡಿದರು.

ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಕ್ಷಿತಾ ಎಂ ಬಿ ವೀರ ಖ್ಯಾತರಾಯ ರವರು ಮಾತನಾಡಿ ಮಹಿಳೆಯರು ದೇಶವನ್ನು ಆಳುವ ಶಕ್ತಿಯನ್ನು ಹೊಂದಿದ್ದಾರೆ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ತೊಟ್ಟಿಲನ್ನು ತೂಗುವ ಕೈ ಜಗತ್ತನ್ನು ಹಾಳಬಲ್ಲದು ಎಂದು ಕರೆ ನೀಡಿದರು.
ಉಪಾಧ್ಯಕ್ಷರಾದ ನರೇಂದ್ರಬಾಬು ರವರು ಮಾತನಾಡಿ ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರಿಗೆ ಎಲ್ಲಾ ರಂಗಗಳಲ್ಲಿಯೂ ಮೀಸಲಾತಿಯನ್ನು ನೀಡಿದೆ ಆ ಮೀಸಲಾತಿಯನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.

ವಿಶೇಷವಾಗಿ ಈ ಮಹಿಳಾ ಗ್ರಾಮ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಮಹಿಳೆಯರಿಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರುಗಳ ಪರವಾಗಿ ಗ್ರಾಮ ಪಂಚಾಯಿತಿ ವತಿಯಿಂದ ಮಹಿಳೆಯರಿಗೆ ಅರಿಶಿಣ ಕುಂಕುಮವನ್ನು ನೀಡಿ ಗೌರವಿಸಲಾಯಿತು.
ಈ ವೇಳೆ ಮಹಿಳಾ ಗ್ರಾಮಸಭೆಯಲ್ಲಿ ಮಹಿಳಾ ಸದಸ್ಯರುಗಳಾದ ಸರೋಜಮ್ಮ, ಹೇಮಾವತಿ, ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರುಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘುನಂದನ್ , ಕಾರ್ಯದರ್ಶಿ ದೀಪಿಕಾರಾಣಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಅನುಸೂಯ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
– ಶ್ರೀನಿವಾಸ್, ಕೊರಟಗೆರೆ.