ಬಣಕಲ್ ನಜರೆತ್ ಶಾಲೆ ಹಾಗೂ ರಿವರ್ ವ್ಯೂ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಬಣಕಲ್– ವಿಶ್ವ ಪರಿಸರ ದಿನದ ಅಂಗವಾಗಿ ಬಣಕಲ್ ನ ನಜರೆತ್ ಶಾಲೆ ಹಾಗೂ ರಿವರ್ ವ್ಯೂ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ನಜರೆತ್ ಶಾಲೆ ಬಣಕಲ್ ನಲ್ಲಿ ವಿಶ್ವ ಪರಿಸರ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮೂಡಿಗೆರೆ ವಲಯ ಅರಣ್ಯಧಿಕಾರಿ ಶ್ರೀಮತಿ ಕಾವ್ಯ ಎಸ್ ಪಿ ಉಪಸ್ಥಿತರಿದ್ದರು. ಶ್ರೀಮತಿ ಕಾವ್ಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಏಕ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮಹತ್ವವನ್ನು ಒತ್ತಿ ಹೇಳಿದರು ಮತ್ತು ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಿದರು.

ಅತಿಥಿಗಳು 20 ವಿಧದ ಹಣ್ಣಿನ ಮತ್ತು 100 ಇತರೆ ಗಿಡಗಳನ್ನು ಪ್ರಯೋಜಿಸಿದರು, ಇವುಗಳನ್ನು ಅಧಿಕಾರಿಗಳು, ಅರಣ್ಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ನೆಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರು ಸಿಸ್ಟರ್ ಹಿಲ್ಡ ಲೋಬೋ, ಬೋದಕ ಹಾಗೂ ಬೋದಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಣಕಲ್ ರಿವರ್ ವ್ಯೂ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳು ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಿವರ್ ವ್ಯೂ ಶಾಲೆಯ ನಿರ್ದೇಶಕರಾದ ಇಮ್ರಾನ್ ರವರು ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದ್ದು, ಇದು ಮಾನವನಿಂದಲೇ ಸರಿಯಾಗಬೇಕಿದೆ. ಮುಂದಿನ ಪೀಳಿಗೆಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸದಿದ್ದರೆ ಮುಂದೆ ಹೆಚ್ಚಿನ ಅಪಾಯ ಎದುರಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು. ಶಿಕ್ಷಕರು ಸಿಬ್ಬಂದಿಗಳು ಹಾಜರಿದ್ದರು.

ವರದಿ ✍️ಸೂರಿ ಬಣಕಲ್

Leave a Reply

Your email address will not be published. Required fields are marked *